- Advertisement -
- Advertisement -
ಮಂಗಳೂರು: ನಗರದ ಕಾವೂರು ಜಂಕ್ಷನ್ನಲ್ಲಿ ಕೆಲವು ಸಮಯಗಳಿಂದ ತೆರೆದಿದ್ದ ಅನಧಿಕೃತ ಗೂಡಂಗಡಿ ಮತ್ತು ಮೀನು ಮಾರುಕಟ್ಟೆಯನ್ನು ಇಂದು ಬೆಳಗ್ಗೆ ತೆರವುಗೊಳಿಸಲಾಗಿದೆ.
ಮಹಾನಗರ ಪಾಲಿಕೆ ಕಂದಾಯ ಅಧಿಕಾರಿ ಪ್ರವೀಣ್ ನೇತೃತ್ವದ ತಂಡ ಬೆಳ್ಳಂಬೆಳಗ್ಗೆ ಕಾರ್ಯಾಚರಣೆ ನಡೆಸಿ 15ಕ್ಕೂ ಅಧಿಕ ಗೂಡಂಗಡಿಗಳು ಮತ್ತು ಮೀನು ಮಾರುಕಟ್ಟೆಯನ್ನು ತೆರವುಗೊಳಿಸಿದರು. ಈ ವೇಳೆ ವರ್ತಕರ ಜೊತೆಬ ಮಾತಿನ ಚಕಮಕಿಯೂ ನಡೆಯಿತು. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.
- Advertisement -