- Advertisement -
- Advertisement -
ಕೆದಿಲ: ಜಾಗದ ವಿಚಾರವಾಗಿ ಕೆದಿಲ ಗ್ರಾಮದ ನಿವೃತ್ತ ಯೋಧ ಶಿವರಾಮ್ ಭಟ್ ಮತ್ತು ಅವರ ಪತ್ನಿಗೆ ಸವಿತಾ ಭಟ್ ರವರಿಗೆ ಅನ್ಯಕೋಮಿನ ತಂಡವೊಂದು ಹಲ್ಲೆ ನಡೆಸಿರುವುದು ಖಂಡನೀಯ ಹಾಗೂ ಈ ತಂಡದಲ್ಲಿ ಸ್ಥಳೀಯ ಗ್ರಾಮ ಪಂಚಾಯತ್ ಸದಸ್ಯ ಕೂಡ ಸೇರಿಕೊಂಡಿರುವುದು ಖೇದಕರ ಎಂದು ಆಸ್ಪತ್ರೆಗೆ ಭೇಟಿ ನೀಡಿದ ಗ್ರಾಮಾಂತರ ಮಂಡಲ ಅಧ್ಯಕ್ಷ ಸಾಜ ರಾಧಕೃಷ್ಣ ಆಳ್ವಾ ಈ ಸಂದರ್ಭದಲ್ಲಿ ಹೇಳಿದರು.
ಅನೇಕ ವರ್ಷದಿಂದ ವಾಸ ಮಾಡುತ್ತಾ ಕೃಷಿ ಕೆಲಸ ಮಾಡಿಕೊಂಡು ಬಂದಿರುವ ಕುಟುಂಬ ತಮ್ಮದೇ ಜಾಗದಲ್ಲಿ ಭಯಭೀತಿಯಿಂದ ಬದುಕಬೇಕಾಗಿ ಬಂದಿರುವಂತದ್ದು ಕಳವಳಕಾರಿ ಎಂದು ತಿಳಿಸಿದರು. ಪೋಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಿ ಕುಟುಂಬಕ್ಕೆ ನ್ಯಾಯ ದೊರಕಿಸಿಕೊಡಬೇಕಾಗಿ ವಿನಂತಿಸಿದ್ದಾರೆ. ಈ ಸಂದರ್ಭದಲ್ಲಿ ಪುತ್ತೂರು ಗ್ರಾಮಾಂತರ ಮಂಡಲ ಉಪಾಧ್ಯಕ್ಷ ಹರಿಪ್ರಸಾದ್ ಯಾದವ್, ಪ್ರಧಾನ ಕಾರ್ಯದರ್ಶೀ ನಿತೀಶ್ ಶಾಂತಿವನ, ಕೆದಿಲ ಕ್ತೀ ಕೇಂದ್ರ ಸಂಚಾಲಕ ಪದ್ಮನಾಭ ಭಟ್ ಈ ಸಂದರ್ಭದಲ್ಲಿ ಜತೆಗಿದ್ದರು.
- Advertisement -