- Advertisement -
- Advertisement -
ಚಿಕ್ಕಬಳ್ಳಾಪುರ: ಕೇರಳ, ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕು ಹೆಚ್ಚಳ ಹಿನ್ನೆಲೆಯಲ್ಲಿ ರಾಜ್ಯದ ಗಡಿಭಾಗಗಳಲ್ಲಿ ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ತಿಳಿಸಿದರು.
ಸಮಾಜ ಕಲ್ಯಾಣ ಇಲಾಖೆಯ ನೂತನ ವಿದ್ಯಾರ್ಥಿನಿಲಯ ಉದ್ಘಾಟಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇರಳ, ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವುದರಿಂದ ಮುನ್ನೆಚ್ಚರಿಕೆ ಕ್ರಮ ವಹಿಸಲು ಸೂಚಿಸಲಾಗಿದೆ. ಇನ್ನಷ್ಟು ಕ್ರಮಕೈಗೊಳ್ಳುವ ಸಂಬಂಧ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗುವುದು. ಪ್ರಧಾನಿ ನರೇಂದ್ರ ಮೋದಿಯವರು ಉಚಿತವಾಗಿ ಲಸಿಕೆ ನೀಡುತ್ತಿದ್ದಾರೆ. ಇದನ್ನು ಸದುಪಯೋಪಡಿಸಿಕೊಳ್ಳಬೇಕು. ಸಾರ್ವಜನಿಕರು ಕೋವಿಡ್ ಸುರಕ್ಷತಾ ಕ್ರಮ ಪಾಲಿಸಬೇಕು ಎಂದರು.
ದೈಹಿಕ ಆರೋಗ್ಯ ಚೆನ್ನಾಗಿದ್ದರೆ ಉತ್ತಮವಾಗಿ ಕೆಲಸ ಮಾಡಬಹುದು. ವರ್ಷದಲ್ಲಿ ಒಮ್ಮೆಯಾದರೂ ನೌಕರರು ಕ್ರೀಡೆ, ಸ್ಪರ್ಧೆಗಳಲ್ಲಿ ಭಾಗವಹಿಸಬೇಕು. ಕ್ರೀಡೆ ಉತ್ತೇಜನಕ್ಕೆ ಜಿಲ್ಲೆಯಲ್ಲಿ ಕ್ರೀಡಾ ವಿಲೇಜ್ ಆರಂಭಿಸಲಾಗುವುದು ಎಂದರು.
- Advertisement -