- Advertisement -
- Advertisement -
ವಿಟ್ಲ: ಕೆಲಿಂಜ ಶ್ರೀ ಉಳ್ಳಾಲ್ತಿ ಅಮ್ಮನವರ ಸನ್ನಿಧಿಯಲ್ಲಿ ಜ.5ರಂದು ನೀಲೇಶ್ವರ ಉಚ್ಚಿಲತ್ತಾಯ ವೇದಮೂರ್ತಿ ಶ್ರೀ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ನವೀಕರಣ ವಾರ್ಷಿಕೋತ್ಸವದ 15ನೇ ವರ್ಷದ ಸಲುವಾಗಿ ಚಂಡಿಕಾಯಾಗ ಹಾಗೂ ವಿವಿಧ ವೈದಿಕ ಕಾರ್ಯಕ್ರಮಗಳು ನಡೆಯಲಿದೆ.
ಜ.5ರಂದು ಬೆಳಿಗ್ಗೆ ಗಂಟೆ 6.15ಕ್ಕೆ ಗಣಪತಿ ಹವನ, ಶ್ರೀ ವಿಷ್ಣು ಪೂಜೆ, ನವಚಂಡಿಕಾಯಾಗ ಪ್ರಾರಂಭಗೊಳ್ಳಲಿದೆ. ಬೆಳಿಗ್ಗೆ ಗಂಟೆ 10 ಕ್ಕೆ ಶ್ರೀ ಕೆಲಿಂಜೇಶ್ವರಿ ಭಜನಾ ಮಂಡಳಿಯವರಿಂದ ಭಜನೆ ನಡೆಯಲಿದೆ. ಬೆಳಿಗ್ಗೆ ಗಂಟೆ 11 ಕ್ಕೆ ಚಂಡಿಕಾ ಯಾಗದ ಪೂರ್ಣಾಹುತಿ ನಡೆಯಲಿದೆ. ಮಧ್ಯಾಹ್ನ ಗಂಟೆ 12ಕ್ಕೆ ಹೂವಿನ ಪೂಜೆ ಹಾಗೂ ಮಹಾಮಂಗಳಾರತಿ, ಮಧ್ಯಾಹ್ನ ಗಂಟೆ 1 ಕ್ಕೆ ಅನ್ನಸಂತರ್ಪಣೆ ನಡೆಯಲಿದೆ.
ಜ.3ರಂದು ಸಂಜೆ ಗಂಟೆ 4ರಿಂದ ಶ್ರೀ ಕ್ಷೇತ್ರದಲ್ಲಿ ಹಸಿರುವಾಣಿ ಹೊರೆಕಾಣಿಕೆ ನಡೆಯಲಿದೆ.
ದಿನಾಂಕ 14-2-2024ನೇ ಬುಧವಾರ ಕಾಲಾವಧಿ ಮೆಚ್ಚಿ ಜಾತ್ರೆ ಜರಗಲಿರುವುದು.
- Advertisement -