- Advertisement -
- Advertisement -
ವಿಟ್ಲ: ಅಳಕೆ ಮಜಲು ನಿವಾಸಿ ಕೆಮನಾಜೆ ಪದ್ಮನಾಭ ನಾಯ್ಕ(53) ರವರು ಅಲ್ಪಕಾಲದ ಅಸೌಖ್ಯದಿಂದ ಇಂದು ನಿಧನರಾಗಿದ್ದಾರೆ.
ಪದ್ಮನಾಭರವರು ಅಳಕೆಮಜಲು ಶ್ರೀ ಶಾರದಾಂಬ ಭಜನಾ ಮಂಡಳಿಯ ಸಕ್ರಿಯ ಕಾರ್ಯಕರ್ತರಾಗಿದ್ದೂ ಅದರ ಎಲ್ಲಾ ಕೆಲಸದಲ್ಲೂ ಭಾಗಿಯಾಗಿ ಮಾರ್ಗದರ್ಶಕರಾಗಿ ಕಾರ್ಯಕ್ರಮದ ಯಶಸ್ವಿಗೆ ಸಹಕರಿಸುವ ವ್ಯಕ್ತಿಯಾಗಿದ್ದರು. ಜೀವನದಲ್ಲಿ ಸರಳ ಸೌಮ್ಯ ಸಜ್ಜನಿಕೆಯಿಂದ ಎಲ್ಲರೊಂದಿಗೆ ಆತ್ಮೀಯರಾಗಿದ್ದರು.
ಮೃತರು ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
- Advertisement -