ವಿಟ್ಲ: ಶಾಲಾ ಶಿಕ್ಷಣ ಇಲಾಖೆ ಸರಕಾರಿ ಪ್ರೌಢ ಶಾಲೆ ಕಲ್ಲಂಗಳ, ಕೇಪು ಇಲ್ಲಿ ಶಾಲಾ ವಾರ್ಷಿಕೋತ್ಸವ ಸಮಾರಂಭವು ಡಿ.23 ರಂದು ಸರಕಾರಿ ಪ್ರೌಢ ಶಾಲೆ ಕಲ್ಲಂಗಳ, ಕೇಪುನಲ್ಲಿ ನಡೆಯಲಿದೆ.
ಸಭಾ ಕಾರ್ಯಕ್ರಮದಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಅಶೋಕ್ ಕುಮಾರ್ ರೈ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಕೇಪು ಗ್ರಾ.ಪಂ.ಅಧ್ಯಕ್ಷ ರಾಘವ ಸಾರಡ್ಕ ಅಧ್ಯಕ್ಷತೆ ವಹಿಸಲಿದ್ದಾರೆ. ಅತಿಥಿಗಳಾಗಿ ಕೇಪು ಗ್ರಾ.ಪಂ.ಸದಸ್ಯರಾದ ಜಗಜೀವನ್ ರಾಮ್ ಶೆಟ್ಟಿ, ಪುರುಷೋತ್ತಮ ಗೌಡ, ವಿಶಾಲಾಕ್ಷಿ, ಮೋಹಿನಿ, ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಮಂಜುನಾಥನ್ ಎಂ.ಜಿ, ಸತೀಶ್ ರೈ ಕಲ್ಲಂಗಳ ಉದ್ಯಮಿ ಪೂನಾ, ಕೃಷ್ಣಯ್ಯ ಕೆ. ಉಸ್ತುವಾರಿಗಳು ಅರಮನೆ ವಿಟ್ಲ, ಪ್ರಗತಿಪರ ಕೃಷಿಕ ಶಂಕರ ಭಟ್ ವಳಕಟ್ಟೆ ಭಾಗವಹಿಸಲಿದ್ದಾರೆ.
ಅಪರಾಹ್ನ 2-30 ರಿಂದ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ. ಬಳಿಕ ಸಂದೇಶ್ ದೀಪ್ ರೈ ಕಲ್ಲಂಗಳ ಸಾರಥ್ಯದ ಶ್ರೀ ಸಾಯಿ ಕಲಾ ಯಕ್ಷ ಬಳಗ ಬಾಲವನ ಪುತ್ತೂರು ಇವರಿಂದ ’ವೀರಮಣಿ ಕಾಳಗ’ ಯಕ್ಷಗಾನ ಪ್ರಸಂಗ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.