Monday, April 29, 2024
spot_imgspot_img
spot_imgspot_img

ಕೇರಳ: ಕಾರ್ಯಕ್ರಮದ ​ನೇರ ಪ್ರಸಾರದ ವೇಳೆ ವ್ಯಕ್ತಿ ಕುಸಿದುಬಿದ್ದು ಸಾವು..!

- Advertisement -G L Acharya panikkar
- Advertisement -

ಕೇರಳ: ದೂರದರ್ಶನ ಟಿವಿ ಕಾರ್ಯಕ್ರಮದ ​ನೇರ ಪ್ರಸಾರದ ವೇಳೆ ಕೃಷಿ ತಜ್ಞರೊಬ್ಬರು ಕುಸಿದುಬಿದ್ದು ಸಾವನ್ನಪ್ಪಿರುವ ಘಟನೆ ಕೇರಳದಲ್ಲಿ ನಡೆದಿದೆ.

ಮೃತಪಟ್ಟ ವ್ಯಕ್ತಿ ಡಾ. ಅನಿ ಎಸ್​ ದಾಸ್ (59) ಎಂದು ಗುರುತಿಸಲಾಗಿದೆ.

ಇವರು ಕೇರಳ ಕೃಷಿ ವಿಶ್ವವಿದ್ಯಾಲಯದ ಪ್ಲಾನಿಂಗ್ ಡೈರೆಕ್ಟರ್ ಆಗಿದ್ದರು. ಇವರು ದೂರದರ್ಶನ ಚಾನಲ್​​​ನ ಕಾರ್ಯಕ್ರಮದ ನೇರಪ್ರಸಾರದಲ್ಲಿ ಭಾಗಿಯಾಗಿದ್ದರು. ಶೋನಲ್ಲಿ ಮಾತನಾಡುತ್ತಿದ್ದ ವೇಳೆ ಕುಸಿದುಬಿದ್ದು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಕೇರಳದ ದೂರದರ್ಶನ ಚಾನಲ್​​ನಲ್ಲಿ ಕೃಷಿ ದರ್ಶನ ಕಾರ್ಯಕ್ರಮ ನಡೆಯುತ್ತಿತ್ತು. ಈ ಕಾರ್ಯಕ್ರಮದಲ್ಲಿ ಅವರು ಭಾಗಿಯಾಗಿದ್ದರು ಎಂದು ವರದಿಯಾಗಿದೆ. ಅಧಿಕಾರಿಗಳು ನೀಡಿರುವ ಮಾಹಿತಿ ಪ್ರಕಾರ, ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ ಅವರು ಬದುಕುಳಿಯಲಿಲ್ಲ ಎಂದು ತಿಳಿಸಿದ್ದಾರೆ.

- Advertisement -

Related news

error: Content is protected !!