- Advertisement -
- Advertisement -
ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ನಡೆದ ಘರ್ಷಣೆಯಲ್ಲಿ ನಾಲ್ವರು ಗಾಯಗೊಂಡ ಘಟನೆ ನಡೆದಿದೆ. ಕೇರಳದ ಕಣ್ಣೂರಿನ ಪಾನೂರಿನಲ್ಲಿ ಈ ಘಟನೆ ನಡೆದಿದೆ. ಯುವ ಕಾಂಗ್ರೆಸ್ ಕಾರ್ಯಕರ್ತ ಸಂದೀಪ್ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಪನ್ನನ್ನೂರು ಕೂರ್ಂಬಕ್ಕಾವ್ ಎಂಬಲ್ಲಿ ನಡೆಯುತ್ತಿದ್ದ ಉತ್ಸವದ ವೇಳೆ ಸಂಘರ್ಷ ನಡೆದಿದೆ ಎನ್ನಲಾಗಿದೆ. ಆರೆಸ್ಸೆಸ್ ಕಾರ್ಯಕರ್ತರಾದ ಅನೀಶ್ ಮತ್ತು ಅತುಲ್ ಕೂಡ ಗಾಯಗೊಂಡಿದ್ದಾರೆ. ಪರಸ್ಪರರ ದೂರಿನ ಮೇರೆಗೆ ಪನ್ನೂರು ಪೊಲೀಸರು ಎರಡೂ ಬಣಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.
- Advertisement -