Thursday, April 18, 2024
spot_imgspot_img
spot_imgspot_img

ಕೆ.ಜಿ ಹಳ್ಳಿ ಗಲಭೆ ಕೇಸ್: ಸಿಎಂಗೆ ವರದಿ ಸಲ್ಲಿಸಿದ ಮದನ್ ಗೋಪಾಲ್ ಸಮಿತಿ

- Advertisement -G L Acharya panikkar
- Advertisement -

ಬೆಂಗಳೂರು: ಡಿ.ಜೆ.ಹಳ್ಳಿ ಹಾಗೂ ಕೆ.ಜಿ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿ ನಿವೃತ್ತ ಅಪರ ಮುಖ್ಯಕಾರ್ಯದರ್ಶಿ ಮದನ್ ಗೋಪಾಲ್ ನೇತೃತ್ವದ ಸತ್ಯ ಶೋಧನಾ ಸಮಿತಿ ಇಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ವರದಿ ಸಲ್ಲಿಸಿದೆ.

ಕಳೆದ ಆಗಸ್ಟ್ 11ರಂದು ಕೆ.ಜಿ.ಹಳ್ಳಿ ಹಾಗೂ ಡಿ.ಜೆ ಹಳ್ಳಿಯಲ್ಲಿ ರಾತ್ರಿ ಕಿಡಿಗೇಡಿಗಳು ಗಲಭೆ ನಡೆಸಿದ್ದರು. ಈ ವೇಳೆ ಪುಲಕೇಶಿ ನಗರ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಮನೆ ಧ್ವಂಸ ಮಾಡಿದ್ದರು. ಫೇಸ್ ಬುಕ್ ಪೋಸ್ಟ್ ನಿಂದಾಗಿ ಗಲಭೆ ನಡೆಸಲಾಗಿತ್ತು. ಈ ವೇಳೆ ನಡೆದ ಗೋಲಿಬಾರ್ ಗೆ ಮೂವರು ಬಲಿಯಾಗಿದ್ದರು. ಈ ಬಗ್ಗೆ ಘಟನೆಯ ವರದಿಗಾಗಿ ಸರ್ಕಾರ ಸತ್ಯಶೋಧನ ಸಮಿತಿ ರಚಿಸಿತ್ತು.

- Advertisement -

Related news

error: Content is protected !!