- Advertisement -
- Advertisement -
ಬೆಂಗಳೂರು: ಡಿ.ಜೆ.ಹಳ್ಳಿ ಹಾಗೂ ಕೆ.ಜಿ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿ ನಿವೃತ್ತ ಅಪರ ಮುಖ್ಯಕಾರ್ಯದರ್ಶಿ ಮದನ್ ಗೋಪಾಲ್ ನೇತೃತ್ವದ ಸತ್ಯ ಶೋಧನಾ ಸಮಿತಿ ಇಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ವರದಿ ಸಲ್ಲಿಸಿದೆ.
ಕಳೆದ ಆಗಸ್ಟ್ 11ರಂದು ಕೆ.ಜಿ.ಹಳ್ಳಿ ಹಾಗೂ ಡಿ.ಜೆ ಹಳ್ಳಿಯಲ್ಲಿ ರಾತ್ರಿ ಕಿಡಿಗೇಡಿಗಳು ಗಲಭೆ ನಡೆಸಿದ್ದರು. ಈ ವೇಳೆ ಪುಲಕೇಶಿ ನಗರ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಮನೆ ಧ್ವಂಸ ಮಾಡಿದ್ದರು. ಫೇಸ್ ಬುಕ್ ಪೋಸ್ಟ್ ನಿಂದಾಗಿ ಗಲಭೆ ನಡೆಸಲಾಗಿತ್ತು. ಈ ವೇಳೆ ನಡೆದ ಗೋಲಿಬಾರ್ ಗೆ ಮೂವರು ಬಲಿಯಾಗಿದ್ದರು. ಈ ಬಗ್ಗೆ ಘಟನೆಯ ವರದಿಗಾಗಿ ಸರ್ಕಾರ ಸತ್ಯಶೋಧನ ಸಮಿತಿ ರಚಿಸಿತ್ತು.
ಬೆಂಗಳೂರಿನ ಡಿ.ಜೆ ಹಳ್ಳಿ ಮತ್ತು ಕೆ.ಜೆ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದ ವರದಿಯನ್ನು ನಿವೃತ್ತ ಅಪರ ಮುಖ್ಯಕಾರ್ಯದರ್ಶಿ ಮದನ್ ಗೋಪಾಲ್ ಅವರ ನೇತೃತ್ವದ ಸತ್ಯ ಶೋಧನಾ ಸಮಿತಿಯು ಇಂದು ಮುಖ್ಯಮಂತ್ರಿ @bsybjp ಅವರಿಗೆ ಸಲ್ಲಿಸಿತು.
— CM of Karnataka (@CMofKarnataka) September 4, 2020
ಸಮಿತಿಯ ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. pic.twitter.com/95Hx8aGSHj
- Advertisement -