- Advertisement -
- Advertisement -
ಬೆಂಗಳೂರು: ಕೆ.ಜಿ.ಹಳ್ಳಿ, ಡಿ.ಜೆ.ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿ ಇಂದು ಸಿಎಂ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಹಿರಿಯ ಅಧಿಕಾರಿಗಳ ಜತೆ ಮಹತ್ವದ ಸಭೆ ನಡೆಸಲಾಯ್ತು. ಸಾರ್ವಜನಿಕ ಹಾಗೂ ಖಾಸಗಿ ಸೊತ್ತುಗಳನ್ನು ನಾಶ ಮಾಡಿದ ಗಲಭೆಕೋರರಿಂದಲೇ ನಷ್ಟ ವಸೂಲಿ ಮಾಡಲು ಹೈಕೋರ್ಟ್ ಗೆ ಮನವಿ ಸಲ್ಲಿಸಲು ನಿರ್ಧರಿಸಲಾಗಿದೆ.

ಸುಪ್ರೀಂಕೋರ್ಟ್ ಆದೇಶದಂತೆ ಕ್ಲೇಮ್ ಕಮಿಷನರ್ ನೇಮಕ ಕೋರಲು ತೀರ್ಮಾನಿಸಲಾಗಿದೆ. ಇನ್ನು ಸಭೆಯಲ್ಲಿ ಗಲಭೆಗೆ ಸಂಬಂಧಿಸಿ ಪೊಲೀಸ್ ಅಧಿಕಾರಿಗಳು ತೆಗೆದುಕೊಂಡ ಕಠಿಣ ಕ್ರಮಗಳ ಬಗ್ಗೆ ಸಿಎಂಗೆ ಮಾಹಿತಿ ನೀಡಿಲಾಗಿದೆ. ಶೀಘ್ರದಲ್ಲೇ ತನಿಖೆ ತ್ವರಿತಗತಿಯಲ್ಲಿ ಸಾಗಲು ವಿಶೇಷ ತನಿಖಾ ತಂಡ ರಚಿಸಲಾಗಿದೆ. ಅವಶ್ಯಕತೆ ಬಿದ್ದಲ್ಲಿ ಬಂಧಿತ ಆರೋಪಿಗಳ ವಿರುದ್ಧ ಗೂಂಡಾ ಕಾಯಿದೆ ಮೂಲಕ ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ರು.

- Advertisement -