Saturday, June 28, 2025
spot_imgspot_img
spot_imgspot_img

ಕೆ.ಜಿ ಹಳ್ಳಿ ಗಲಭೆ: ಸಿಸಿಬಿ ವಿಚಾರಣೆಗೆ ಮಾಜಿ ಮೇಯರ್ ಸಂಪತ್ ರಾಜ್ ಹಾಜರು

- Advertisement -
- Advertisement -

ಬೆಂಗಳೂರು: ಕೆ.ಜಿ.ಹಳ್ಳಿ ಹಾಗೂ ಡಿ.ಜೆ.ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿ ಮಾಜಿ ಮೇಯರ್ ಸಂಪತ್ ರಾಜ್ ಹಾಗೂ ಪುಲಕೇಶಿನಗರ ವಾರ್ಡ್ ಕಾರ್ಪೊರೇಟರ್ ಜಾಕೀರ್ ಸಿಸಿಬಿ ವಿಚಾರಣೆಗೆ ಹಾಜರಾಗಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿ ಅರೆಸ್ಟ್ ಆಗಿರುವ ಆರೋಪಿಗಳ ಜತೆ ಇವರಿಬ್ಬರು ನಿರಂತರ ಸಂಪರ್ಕದಲ್ಲಿದ್ದರು ಎಂಬ ಆರೋಪ ಕೇಳಿಬಂದಿದೆ. ಇದಲ್ಲದೇ, ಹಣ ಸಂದಾಯ ಮಾಡಿದ್ದಾರೆ ಎಂಬ ದೂರು ಕೇಳಿಬಂದಿದೆ. ಈ ಹಿನ್ನಲೆಯಲ್ಲಿ ಚಾಮರಾಜಪೇಟೆ ಸಿಸಿಬಿ ಮುಖ್ಯ ಕಚೇರಿಯಿಂದ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿತ್ತು. ಈ ಹಿನ್ನಲೆಯಲ್ಲಿ ಇಬ್ಬರು ಕಾರ್ಪೊರೇಟರ್ ಗಳು ತಮ್ಮ ವಕೀಲರ ಜತೆ ವಿಚಾರಣೆಗೆ ಹಾಜರಾಗಿದ್ದು, ಸಿಸಿಬಿ ಜಂಟಿ ಆಯುಕ್ತ ಸಂದೀಪ್ ಪಾಟೀಲ್ ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

- Advertisement -

Related news

error: Content is protected !!