- Advertisement -
- Advertisement -
ಬೆಂಗಳೂರು: ಕೆ.ಜಿ.ಹಳ್ಳಿ ಹಾಗೂ ಡಿ.ಜೆ.ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿ ಪ್ರಮುಖ ಆರೋಪಿ ಎಸ್ ಡಿಪಿಐ ಕಾರ್ಯಕರ್ತ ಖಾಲೀದ್ ನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಈತ ಡಿ.ಜೆ.ಹಳ್ಳಿಯ ರೋಷನ್ ನಗರದ ನಿವಾಸಿ. ಆರೋಪಿಗಳಾದ ಮುಜಾಮಿಲ್, ಅಯಾಜ್,ಆಫ್ನಾನ್ ಜತೆಗೂಡಿ ಎಸ್ ಡಿಪಿಐ ಕಾರ್ಯಕರ್ತರನ್ನು ಒಗ್ಗೂಡಿಸಿ ಗಲಾಟೆ ಮಾಡಿಸಿದ್ದ ಎಂಬ ಆರೋಪ ಕೇಳಿಬಂದಿದೆ. ಈತನ ಜತೆ ಕೆಲ ರಾಜಕೀಯ ನಾಯಕರು ಕೂಡ ಸಂಪರ್ಕ ಇಟ್ಟುಕೊಂಡಿದ್ದಾರೆ ಎನ್ನಲಾಗಿದೆ. ಸದ್ಯ ಪ್ರಮುಖ ಆರೋಪಿಯನ್ನು ವಶಕ್ಕೆ ಪಡೆದ ಡಿ.ಜೆ.ಹಳ್ಳಿ ಪೊಲೀಸರು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.
- Advertisement -