Saturday, June 29, 2024
spot_imgspot_img
spot_imgspot_img

ಕೆ.ಜಿ.ಹಳ್ಳಿ ಗಲಭೆ: ಮಾಜಿ ಮೇಯರ್ ಸಂಪತ್ ರಾಜ್ ಪಿಎ ಅರುಣ್ ಅರೆಸ್ಟ್

- Advertisement -G L Acharya panikkar
- Advertisement -

ಕೆ.ಜಿ.ಹಳ್ಳಿ ಹಾಗೂ ಡಿ.ಜೆ.ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿ ಮಾಜಿ ಮೇಯರ್ ಸಂಪತ್ ರಾಜ್ ಪಿಎ ಅರುಣ್ ನನ್ನು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ವಿಚಾರಣೆಗಾಗಿ ನಿನ್ನೆ ರಾತ್ರಿ ಆತನನ್ನು ಪುಲಕೇಶಿ ನಗರದಲ್ಲಿ ವಶಕ್ಕೆ ಪಡೆದುಕೊಂಡಿದ್ದರು. ಆದರೆ ಇಂದು ಆತನನ್ನು ಬಂಧಿಸಿದ ಸಿಸಿಬಿ ಪೊಲೀಸರು ಆತನನ್ನು ಕೋರ್ಟ್ ಗೆ ಹಾಜರುಪಡಿಸಲಿದ್ದಾರೆ ಎಂದು ತಿಳಿದುಬಂದಿದೆ.

ಗಲಭೆ ನಡೆಸಿದ ಆರೋಪಿಗಳ ಜತೆ ಅರುಣ್ ಸಂಪರ್ಕದಲ್ಲಿದ್ದ ಎಂಬ ಆರೋಪವಿದೆ. ಅಲ್ಲದೇ, ಪ್ರಕರಣದ ಪ್ರಮುಖ ಆರೋಪಿ ಮುಜಾಮಿಲ್ ಜತೆ ಸಂಪರ್ಕದಲ್ಲಿದ್ದ. ಘಟನೆಯ ಚಿತ್ರಣವನ್ನು ವಿಡಿಯೋ ರೆಕಾರ್ಡ್ ಮಾಡಿ ಮುಜಾಮಿಲ್ ಅರುಣ್ ಮೊಬೈಲ್ ಗೆ ಕಳುಹಿಸಿದ್ದ ಎನ್ನಲಾಗಿದೆ. ಆರೋಪಿಗಳ ಜತೆ ವಾಟ್ಸಪ್ ಕಾಲ್ ಮಾಡಿ ಅರುಣ್ ಮಾತನಾಡಿದ್ದ ಎಂಬ ಆರೋಪ ಕೇಳಿಬಂದಿದೆ.

- Advertisement -

Related news

error: Content is protected !!