Tuesday, May 21, 2024
spot_imgspot_img
spot_imgspot_img

ಬೆಳ್ತಂಗಡಿ: ನಿಲ್ಲಿಸಿದ್ದ ಬೈಕ್‌ ಕದ್ದ ಖದೀಮರು

- Advertisement -G L Acharya panikkar
- Advertisement -

ಬೆಳ್ತಂಗಡಿ: ನಿಲ್ಲಿಸಿದ್ದ ಬೈಕನ್ನು ಕಳ್ಳರು ಕಳವುಗೈದಿರುವ ಘಟನೆ ಶ್ರೀ ಕ್ಷೇತ್ರ ಧರ್ಮಸ್ಥಳದ ಮಾಹಿತಿ ಕಛೇರಿ ಬಳಿ ಇರುವ ಯೂನಿಯನ್ ಬ್ಯಾಂಕ್ ಎಟಿಎಂ ಬಳಿ ನಡೆದಿದೆ.

ಹಿಟ್ನಾಳ್‌ ಗ್ರಾಮ, ಕೊಪ್ಪಳ ನಿವಾಸಿ ಬಸವರಾಜ್.ಎಸ್. ಎಂಬವರು ಧರ್ಮಸ್ಥಳ ಗ್ರಾಮದ ಶ್ರೀ ಕ್ಷೇತ್ರ ಧರ್ಮಸ್ಥಳದ ಮಾಹಿತಿ ಕಛೇರಿ ಬಳಿ ಇರುವ ಯೂನಿಯನ್ ಬ್ಯಾಂಕ್ ಎಟಿಎಂ ಬಳಿ ಬೈಕನ್ನು ನಿಲ್ಲಿಸಿದ್ದರು ಎಂದು ತಿಳಿದು ಬಂದಿದೆ.

ಮರುದಿನ ಬೆಳಿಗ್ಗೆ ಬಂದು ನೋಡಿದಾಗ ಕಾಣದಿದ್ದು, ಸದ್ರಿ ಪರಿಸರದಲ್ಲಿ ಹುಡುಕಿದರೂ ಪತ್ತೆಯಾಗಿರುವುದಿಲ್ಲ. ಅಂದಾಜು 15000ರೂ. ಮೌಲ್ಯದ ಬೈಕನ್ನು ಯಾರೋ ಕಳ್ಳರು ಕಳವು ಮಾಡಿಕೊಂಡು ಹೋಗಿರುವುದಾಗಿ ಬಸವರಾಜ್.ಎಸ್, ಅವರು ನೀಡಿದ ದೂರಿನ ಮೇರೆಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

- Advertisement -

Related news

error: Content is protected !!