ಜ್ಯೋತಿಷಿಯ 18 ವರ್ಷದ ಪುತ್ರನನ್ನು ಕಿಡ್ನಾಪ್ ಮಾಡಿದ ಘಟನೆ ಆಗಸ್ಟ್ 4ರಂದು ಬೆಂಗಳೂರಿನಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಪೊಲೀಸರು ಆರೋಪಿ ಅರ್ಜುನ್ ನನ್ನು ಬಂಧಿಸಿದ್ದಾರೆ.
ಬಂಧಿತ ಯುವಕ ಅರ್ಜುನ್ ಮೂಲತಃ ತುಮಾಕೂರಿನವನು. ಬೆಂಗಳೂರಿನಲ್ಲಿ ಪಿಜಿಯಲ್ಲಿ ವಾಸಿಸುತ್ತಿದ್ದು, ಗ್ಯಾರೇಜ್ನಲ್ಲಿ ಕೆಲಸ ಮಾಡುತ್ತಿದ್ದ. ಈ ನಡುವೆ ಸಿನಿಮಾ ನೋಡುತಿದ್ದ ಅರ್ಜುನ್ನಿಂದ ಜ್ಯೋತಿಷಿ ಪುತ್ರನನ್ನು ಕಿಡ್ನಾಪ್ ಮಾಡುವ ಖತರ್ನಾಕ ಯೋಚನೆ ಬಂದಿದೆ.
ಜ್ಯೋತಿಷಿ ಮಗ ಮೆಡಿಕಲ್ ಸೀಟ್ಗಾಗಿ ಕೋಚಿಂಗ್ಗೆ ತೆರಳುತ್ತಿದ್ದ. ತಮ್ಮದೇ ಕಾರ್ನಲ್ಲಿ ಕೋಚಿಂಗ್ ತೆರಳುತ್ತಿದ್ದು, ಡ್ರಾಪ್ ಕೇಳುವ ನೆಪದಲ್ಲಿ, ಗನ್ ಹಣೆಗಿಟ್ಟು ಗಾಡಿ ಹೇಳಿದ ಕಡೆ ಹೊಗುವಂತೆ ಸೂಚಿಸಿ ಕಿಡ್ನಾಪ್ ಮಾಡಿ ಬಳಿಕ ಜ್ಯೋತಿಷಿ ಹಾಗೂ ಅವರ ಪತ್ನಿಗೆ ವಾಟ್ಸ್ ಆ್ಯಪ್ ವಿಡಿಯೋ ಕಾಲ್ ಮಾಡಿ, 5 ಲಕ್ಷ ರೂ. ಡಿಮ್ಯಾಂಡ್ ಮಾಡಿದ್ದಾನೆ.
ಬಳಿಕ ಚಿನ್ನ ನೀಡುವುದಾಗಿ ಹೇಳಿ ಜ್ಯೋತಿಷಿ ಪತ್ನಿ ಮನೆಯಿಂದ ಹೊರಟಿದ್ದಾರೆ. ಮತ್ತೊಂದೆಡೆ ಮಗ ಕಿಡ್ನಾಪ್ ಆದ ಬಗ್ಗೆ ಜ್ಯೋತಿಷಿ ಪೊಲೀಸರಿಗೆ ದೂರು ನೀಡಿದ್ದಾರೆ.
ಸದ್ಯ ಕಿಡ್ನಾಪ್ ಪ್ರಕರಣವನ್ನು ಹೆಚ್ಎಸ್ ಆರ್ ಲೇಔಟ್ ಪೊಲೀಸರು ಭೇದಿಸಿದ್ದು, ಅರ್ಜುನ್ (19) ಎಂಬಾತನನ್ನು ಬಂಧಿಸಿದ್ದಾರೆ.