Thursday, April 25, 2024
spot_imgspot_img
spot_imgspot_img

ಕಿನ್ನಿಗೋಳಿ-ಈಜಲು ನದಿಗೆ ಇಳಿದ ಮೂವರಲ್ಲಿ ಒರ್ವ ಸಾವು.ಇಬ್ಬರ ರಕ್ಷಣೆ.

- Advertisement -G L Acharya panikkar
- Advertisement -

ಕಿನ್ನಿಗೋಳಿ:- ಈಜಾಡಲು ನದಿ ನೀರಿಗಿಳಿದ ಮೂವರಲ್ಲಿ ಓರ್ವ ನೀರಿನಲ್ಲಿ‌ ಮುಳುಗಿ ಸಾವನ್ನಪ್ಪಿದ ಘಟನೆ ಕಿನ್ನಿಗೋಳಿ ಸಮೀಪದ ಕರ್ನಿರೆ ಎಂಬಲ್ಲಿನ ಶಾಂಭವಿ ನದಿಯಲ್ಲಿ ನಡೆದಿದೆ.

ಬೆಂಗಳೂರು ನಿವಾಸಿ 32 ವರ್ಷದ ಅನಿಲ್ ಎಂಬಾತ ಮೃತಪಟ್ಟರು ದುರ್ದೈವಿ. ಬೆಂಗಳೂರಿನಿಂದ ಆಗಮಿಸಿದ 7 ಮಂದಿ ಯುವಕರು ಕರ್ನಿರೆ ಬಳಿಯ ಶಾಂಭವಿ ನದಿಯ ಕಡೆಗೆ ಬಂದಿದ್ದು, ನದಿ‌ ನೀರಿನಲ್ಲಿ ಈಜಾಡಲು ಮೂವರು ನೀರಿಗಿಳಿದ್ದಿದ್ದರು.ಈ ವೇಳೆ ಈಜಾಡುತ್ತಿದ್ದ ಮೂವರು ನೀರಿನ ಸೆಳೆತಕ್ಕೆ ಸಿಕ್ಕಿದ್ದು, ನೀರು ಅವರನ್ನು ಕೊಚ್ಚಿಕೊಂಡು ಹೋಗಿತ್ತು.

ತಕ್ಷಣ ಅಲ್ಲೇ ಇದ್ದ ಸ್ಥಳೀಯರು ನೀರಿಗಿಳಿದು ಇಬ್ಬರನ್ನು ರಕ್ಷಿಸಿದ್ದು ಅನಿಲ್ ನನ್ನು ರಕ್ಷಿಸುವಲ್ಲಿ ಪ್ರಯತ್ನಪಟ್ಟರೂ ಆತ ನೀರಿನಲ್ಲಿ ಮುಳುಗಿ ಸಾವಿಗೀಡಾಗಿದ್ದಾನೆ.ಸ್ಥಳಕ್ಕೆ ಮೂಲ್ಕಿ ಠಾಣಾ ಪೊಲೀಸರು ಪೋಲಿಸರು ಭೇಟಿ ನೀಡಿ ಪರೀಶೀಲನೆ ನಡೆಸಿದ್ದು,ಮುಲ್ಕಿ‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!