- Advertisement -
- Advertisement -
ಕಿನ್ನಿಗೋಳಿ: ಕಾರು ಚಾಲಕನೋರ್ವ ತನ್ನ ನಿಯಂತ್ರಣ ತಪ್ಪಿ ಕಿರು ಸೇತುವೆಯ ತಡೆ ಬೇಲಿಗೆ ಡಿಕ್ಕಿ ಹೊಡೆದ ಘಟನೆ ಕಿನ್ನಿಗೋಳಿ ಸಮೀಪದ ಉಲ್ಲಂಜೆಯಲ್ಲಿ ನಡೆದಿದೆ.
ಬಜಪೆ ಕಡೆಯಿಂದ ಕಿನ್ನಿಗೋಳಿ ಕಡೆಗೆ ಸಂಚರಿಸುತ್ತಿದ್ದ ಕಾರು ಉಲ್ಲಂಜೆ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಕಾರು ಎಡಕ್ಕೆ ಚಲಿಸಿ ಮುಂಭಾಗದಲ್ಲಿದ್ದ ಕಿರುಸೇತುವೆಯ ತಡೆ ಬೇಲಿಗೆ ಡಿಕ್ಕಿ ಹೊಡೆದು ರಸ್ತೆಯ ಮದ್ಯ ಭಾಗಕ್ಕೆ ಚಲಿಸಿ ಕಾರಿನಲ್ಲಿದ್ದವರು ಅಲ್ಪ ಸ್ವಲ್ಪ ಗಾಯಗಳಿಂದ ಪಾರಾಗಿದ್ದಾರೆ. ಡಿಕ್ಕಿ ಹೊಡೆದ ರಭಸಕ್ಕೆ ಕಾರಿನ ಮುಂಭಾಗದ ಏಡ ಬದಿಯ ಟಯರ್ ಒಡೇದು ಹೋಗಿದ್ದು ಕಾರು ಜಖಂಗೊಂಡಿದೆ. ಅಲ್ಲದೆ ತಡೆ ಬೇಲಿ ಕುಸಿದು ಬಿದ್ದಿದೆ, ಹತ್ತಿರದಲ್ಲೇ ನಿಲ್ಲಿಸಿದ್ದ ದ್ವಿಚಕ್ರ ವಾಹನಕ್ಕೆ ಹಾನಿಯಾಗಿದದೆ, ಸ್ಥಳಕ್ಕೆ ಬೇಟಿ ನೀಡಿದ ಬಜಪೆ ಪೋಲೀಸರು ಘಟನೆಯ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ.
- Advertisement -