Saturday, June 28, 2025
spot_imgspot_img
spot_imgspot_img

ಚಾಕುವಿನಿಂದ ಇರಿದು ಅಡುಗೆ ಭಟ್ಟನ ಕೊಲೆ..!

- Advertisement -
- Advertisement -

ಚಾಕುವಿನಿಂದ ಇರಿದು ಅಡುಗೆ ಭಟ್ಟನನ್ನ ಕೊಲೆ ಮಾಡಿದ ಘಟನೆ ಬೆಂಗಳೂರಿನ ರಾಜಾಜಿನಗರದ 6ನೇ ಬ್ಲಾಕ್​ನಲ್ಲಿ ನಡೆದಿದೆ.

ರವಿ ಭಂಡಾರಿ(44) ಮೃತ ವ್ಯಕ್ತಿ. ಮೃತ ರವಿ ಭಂಡಾರಿ ರಾಜಾಜಿನಗರದ ಪಿಜಿಯಲ್ಲಿ ಅಡುಗೆ ಭಟ್ಟನಾಗಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಅದೇ ಪಿಜಿಯಲ್ಲಿ ಅಡುಗೆ ಸಹಾಯಕಿಯಾಗಿ ಕೆಲಸ ಮಾಡುತ್ತಿದ್ದ ಪದ್ಮಾವತಿ ಎಂಬ ಮಹಿಳೆಯ ಪುತ್ರ ರಾಹುಲ್​ ಎಂಬಾತ ಈ ಕೃತ್ಯವೆಸಗಿದ್ದಾನೆ.

ಆರೋಪಿ ರಾಹುಲ್ ತನ್ನ ತಾಯಿ ಜೊತೆ ಅನ್ಯೋನ್ಯವಾಗಿ ಮಾತಾಡುತ್ತಿದ್ದಾನೆಂದು ಕೊಲೆ ಮಾಡಿದ್ದಾನೆ. ಇನ್ನು ಘಟನೆಗೂ ಮುನ್ನ ಆರೋಪಿ ತಾಯಿ ಪದ್ಮಾವತಿಯವರು ಪಿಜಿಯಲ್ಲಿದ್ದರು. ಈ ವೇಳೆ ರಾಹುಲ್, ರವಿ ಭಂಡಾರಿಗೆ ಕರೆ ಮಾಡಿ ನಿನ್ನ ಜೊತೆ ಮಾತಾಡಬೇಕೆಂದು ಮನೆಗೆ ಕರೆಸಿಕೊಂಡಿದ್ದ. ನಂತರ ಚಾಕುವಿನಿಂದ ಇರಿದು ಅಡುಗೆಭಟ್ಟ ರವಿ ಭಂಡಾರಿಯನ್ನು ಹತ್ಯೆ ಮಾಡಿ, ಮೊಬೈಲ್​ ಸ್ವಿಚ್​​ಆಫ್​ ಮಾಡಿಕೊಂಡು ಪರಾರಿಯಾಗಿದ್ದಾನೆ. ಈ ಕುರಿತು ಮಾಗಡಿ ರೋಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Insta: glacharyajewellers
Fb: glacharya

- Advertisement -

Related news

error: Content is protected !!