- Advertisement -
- Advertisement -
ಬೆಂಗಳೂರು: ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಅವರ ಮನೆ ಮೇಲೆ ನಡೆದ ದಾಳಿ ಪ್ರಕರಣ ಸಂಬಂಧ ಅರೆಸ್ಟ್ ಆಗಿರುವ ಮಾಜಿ ಮೇಯರ್ ಸಂಪತ್ ರಾಜ್ರನ್ನ ನ್ಯಾಯಾಲಯ ಇಂದಿನಿಂದ ಐದು ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದೆ.
ಪ್ರಕರಣದಲ್ಲಿ 51ನೇ ಆರೋಪಿಯಾಗಿರುವ ಸಂಪತ್ ರಾಜ್ ಸುಮಾರು ಒಂದು ತಿಂಗಳಿನಿಂದ ನಾಪತ್ತೆಯಾಗಿದ್ದರು. ಕಳೆದ ಮಂಗಳವಾರಂದು ಸಿಸಿಬಿ ಕೊನೆಗೂ ಅವರನ್ನ ಬಂಧಿಸಿ ಪೊಲೀಸ್ ಕಸ್ಟಡಿಗೆ ಪಡೆದು ವಿಚಾರಣೆ ನಡೆಸಿತ್ತು.
ಕಸ್ಟಡಿ ಅವಧಿ ಇಂದು ಅಂತ್ಯವಾದ ಹಿನ್ನೆಲೆ ಮಧ್ಯಾಹ್ನ ಸಂಪತ್ರನ್ನ 67ನೇ ಸಿಸಿಎಚ್ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.ಈ ವೇಳೆ ಕೋರ್ಟ್ ಸಂಪತ್ ರಾಜ್ರನ್ನ ನವೆಂಬರ್ 24ರವರೆಗೂ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿದೆ.
- Advertisement -