Thursday, April 25, 2024
spot_imgspot_img
spot_imgspot_img

ಅಜ್ಞಾತ ಸ್ಥಳದಲ್ಲಿ ಸಂಪತ್ ರಾಜ್ ವಿಚಾರಣೆ- ಇಂದು ನ್ಯಾಯಾಲಯಕ್ಕೆ ಹಾಜರು

- Advertisement -G L Acharya panikkar
- Advertisement -

ಬೆಂಗಳೂರು: ನಗರದ ಕೆ ಜಿ ಹಳ್ಳಿ ಮತ್ತು ಡಿ ಜೆ ಹಳ್ಳಿಯಲ್ಲಿ ನಡೆದ ಹಿಂಸಾಚಾರ ಪ್ರಕರಣದ ಆರೋಪಿಯಾಗಿರುವ ಮಾಜಿ ಮೇಯರ್ ಸಂಪತ್ ರಾಜ್ ಅವರ ವಿಚಾರಣೆ ಮುಂದುವರಿದಿದೆ. ಅಜ್ಞಾತ ಸ್ಥಳದಲ್ಲಿ ಅವರನ್ನು ತೀವ್ರ ವಿಚಾರಣೆಗೆ ಗುರಿಪಡಿಸಲಾಗಿದೆ.

ಸಂಪತ್ ರಾಜ್ ಗಲಭೆ ಪ್ರಕರಣದ 51ನೇ ಆರೋಪಿಯಾಗಿದ್ದಾರೆ. ಕಳೆದ 22 ದಿನಗಳಿಂದ ಪೊಲೀಸರ ಕಣ್ಣು ತಪ್ಪಿಸಿ ತಲೆಮರೆಸಿಕೊಂಡಿದ್ದ ಸಂಪತ್ ರಾಜ್ ಅವರನ್ನು ಸೋಮವಾರ ರಾತ್ರಿ ಬಂಧಿಸಲಾಗಿತ್ತು. ಮುಂಜಾನೆ ಅವರ ಆಪ್ತ ರಿಯಾಜುದ್ದೀನ್ ನನ್ನು ಪೊಲೀಸರು ಬಂಧಿಸಿದ್ದರು.

ರಿಯಾಜುದ್ದೀನ್ ನೀಡಿದ ಖಚಿತ ಮಾಹಿತಿ ಆಧಾರದಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು ಸಂಪತ್ ರಾಜ್ ಅವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದರು. ಇಂದು ಸಂಪತ್ ರಾಜ್ ಅವರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುವುದು.

ಕಸ್ಟಡಿಗೆ ನೀಡುವಂತೆ ಪೊಲೀಸರು ನ್ಯಾಯಾಲಯಕ್ಕೆ ಮನವಿ ಸಲ್ಲಿಸುವ ಸಾಧ್ಯತೆಯಿದೆ.

- Advertisement -

Related news

error: Content is protected !!