- Advertisement -
- Advertisement -


ಮಡಿಕೇರಿ: ವ್ಯಕ್ತಿಯೊಬ್ಬರು ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ನೆಲಜಿ ಗ್ರಾಮದಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ನೆಲಜಿ ಗ್ರಾಮದ ನಿವಾಸಿ ಚಿಯಕಪೂವಂಡ ರಂಜು ತಿಮ್ಮಯ್ಯ(55) ಎಂದು ಗುರುತಿಸಲಾಗಿದೆ.
ರಂಜು ತಿಮ್ಮಯ್ಯ ಅವರು ಸಾಲಬಾಧೆಯಿಂದ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ. ಇದರಿಂದಾಗಿ ಮಾ. 25ರಂದು ಬೆಳಗ್ಗೆ ನೆಲಜಿ ಗ್ರಾಮದ ತಮ್ಮ ಮನೆ ಸಮೀಪದಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ.
ರಂಜು ತಿಮ್ಮಯ್ಯ ಅವರ ಪತ್ನಿ ತಾರಾಮಣಿ ಅವರು ನೀಡಿದ ದೂರಿನ ಅನ್ವಯ ನಾಪೋಕ್ಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -