Wednesday, April 24, 2024
spot_imgspot_img
spot_imgspot_img

ರಾಷ್ಟ್ರಪತಿಯವರಿಂದ ರಾಜ್ಯದ ಪ್ರಥಮ ‘ವಾರ್ ಮ್ಯೂಸಿಯಂ’ ಲೋಕಾರ್ಪಣೆ

- Advertisement -G L Acharya panikkar
- Advertisement -

ಕೊಡಗು: ರಾಜ್ಯದ ಪ್ರಥಮ ವಾರ್ ಮ್ಯೂಸಿಯಂ ಲೋಕಾರ್ಪಣೆಗೊಂಡಿದ್ದು, ರಾಷ್ಟ್ರಪತಿ ರಾಮನಾಥ್ ಕೋವಿಂದ್ ರವರು ತೂಗುದೀಪ ಬೆಳಗಿ ಮಡಿಕೇರಿಯ ಜನರಲ್ ಕೆ.ಎಸ್. ತಿಮ್ಮಯ್ಯ ಮ್ಯೂಸಿಯಂ ಉದ್ಘಾಟಿಸಿದ್ದಾರೆ.

ಬಳಿಕ ಯುದ್ಧ ಸ್ಮಾರಕಕ್ಕೆ ಪುಷ್ಪಗುಚ್ಛವಿರಿಸಿ ಗೌರವ ಸೂಚಿಸಿದ್ದಾರೆ. ಕಾರ್ಯಕ್ರಮದಲ್ಲಿ ಸೇನಾಪಡೆಗಳ ಮುಖ್ಯಸ್ಥ ಬಿಪಿನ್ ರಾವತ್, ಸಚಿವರಾದ ಅರವಿಂದ ಲಿಂಬಾವಳಿ ಹಾಗೂ ವಿ.ಸೋಮಣ್ಣ ಉಪಸ್ಥಿತರಿದ್ದರು.

ಎರಡು ದಿನಗಳ ಹಿಂದೆ ರಾಜ್ಯಕ್ಕೆ ಆಗಮಿಸಿರುವ ರಾಷ್ಟ್ರಪತಿಗಳು ಕೊಡಗು ಪ್ರವಾಸ ಕೈಗೊಂಡಿದ್ದು ಕುಟುಂಬ ಸಮೇತ ತಲಕಾವೇರಿಗೆ ಭೇಟಿ ನೀಡಿದ್ದಾರೆ. ಪತ್ನಿ ಸವಿತಾ ಕೋವಿಂದ್​ ಜೊತೆ ಕಾವೇರಿಯ ಸನ್ನಿಧಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

- Advertisement -

Related news

error: Content is protected !!