Monday, May 13, 2024
spot_imgspot_img
spot_imgspot_img

ಕೊಕ್ಕಡ: ಕಾರು-ಬೈಕ್ ನಡುವೆ ಅಪಘಾತ; ಬೈಕ್ ಸವಾರರಿಗೆ ಗಾಯ..!

- Advertisement -G L Acharya panikkar
- Advertisement -

ಕೊಕ್ಕಡ: ಕಾರು ಹಾಗೂ ಬೈಕ್ ನಡುವೆ ಅಪಘಾತ ನಡೆದ ರಿಣಾಮ ಬೈಕ್ ಸವಾರರಿಬ್ಬರು ರಸ್ತೆಗೆ ಎಸೆಯಲು ಪಟ್ಟು ತೀವ್ರವಾಗಿ ಗಾಯಗೊಂಡ ಘಟನೆ ಕೊಕ್ಕಡ ಕಾಪಿನಬಾಗಿಲು ಬಳಿ ನಡೆದಿದೆ.

ಗಾಯಗೊಂಡ ಬೈಕ್ ಸವಾರರನ್ನು ನಿಡ್ಲೆ ನಿವಾಸಿ ಗಿರೀಶ್ ಹಾಗೂ ನೆಲ್ಯಾಡಿ ಮಾದರಿಯ ನಿವಾಸಿ ಹೊನ್ನಪ್ಪ ಎಂದದು ಗುರುತಿಸಲಾಗಿದೆ.

ಕೊಕ್ಕಡ ದಿಂದ ಧರ್ಮಸ್ಥಳದ ಕಡೆಗೆ ಹೋಗುತ್ತಿದ್ದ ಬೈಕ್ ಹಾಗೂ ಧರ್ಮಸ್ಥಳ ಕಡೆಯಿಂದ ಕೊಕ್ಕಡ ಕಡೆಗೆ ಆಜಾಗರೂಕತೆ ಹಾಗೂ ನಿರ್ಲಕ್ಷತನದಿಂದ ಚಲಾಯಿಸಿಕೊಂಡು ಬರುತ್ತಿದ್ದ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರು ರಸ್ತೆಗೆ ಎಸೆಯಲು ಪಟ್ಟು ತೀವ್ರವಾಗಿ ಗಾಯಗೊಂಡ ಘಟನೆ ನಡೆದಿದೆ. ಗಾಯಗೊಂಡವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. ಅಪಘಾತದಲ್ಲಿ ಎರಡು ವಾಹನಗಳು ಜಖಂ ಗೊಂಡಿದೆ. ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!