Saturday, June 28, 2025
spot_imgspot_img
spot_imgspot_img

ಕೊಕ್ಕಡ: ಮನೆಯವರನ್ನು ಕಟ್ಟಿಹಾಕಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ದೋಚಿ ಪರಾರಿ!!

- Advertisement -
- Advertisement -

ಕೊಕ್ಕಡ: ಮನೆಯೊಂದಕ್ಕೆ ನುಗ್ಗಿದ 9 ಮಂದಿ ದುಷ್ಕರ್ಮಿಗಳು ಮನೆಯ ಮಂದಿಯನ್ನು ಕಟ್ಟಿಹಾಕಿ ಲಕ್ಷಾಂತರ ರೂಪಾಯಿ ನಗ, ನಗದು ದೋಚಿ ಪರಾರಿಯಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕೊಕ್ಕಡದಲ್ಲಿ ನಡೆದಿದೆ.

ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಕೌಕ್ರಾಡಿ ಗ್ರಾಮದ ಪ್ರಸಿದ್ಧ ಸೌತಡ್ಕ ಮಹಾಗಣಪತಿ ದೇವಸ್ಥಾನದ ಸಮೀಪ ಮನೆಯೊಂದಕ್ಕೆ ನುಗ್ಗಿದ ಸುಮಾರು ಒಂಬತ್ತು ಜನರ ತಂಡವೊಂದು ಮನೆ ಮಾಲಿಕನನ್ನು ಕಟ್ಟಿ ಹಾಕಿ, ‌ಮನೆಯ ಮಹಿಳೆಯ ಮೇಲೆ ಚೂರಿಯಿಂದ ದಾಳಿ ಮಾಡಿ, ನಂತರ ಅಪಾರ ಪ್ರಮಾಣದ ಚಿನ್ನಾಭರಣ, ನಗದು ದೋಚಿ‌ ಪರಾರಿಯಾಗಿದ್ದಾರೆ.

ಸೌತಡ್ಕ ದೇವಸ್ಥಾನ ಸಮೀಪ ಇರುವ ತುಕ್ರಪ್ಪ ಶೆಟ್ಟಿ ಎಂಬವರ ಅವರ ಮನೆಯಲ್ಲಿ ಮಧ್ಯರಾತ್ರಿ 12 ರಿಂದ 2 ಗಂಟೆಯ ನಡುವೆ ಈ ಕೃತ್ಯ ನಡೆದಿದ್ದು, ಸುಮಾರು ಒಂಬತ್ತು ಜನರ ತಂಡದಿಂದ ದರೋಡೆ ‌ನಡೆದಿದೆ ಎನ್ನಲಾಗಿದೆ. ಮನೆಯ ಮಾಲಿಕ ತುಕ್ರಪ್ಪ ಶೆಟ್ಟಿ ಅವರನ್ನು ಕಟ್ಟಿ ಹಾಕಿ ದರೋಡೆಗೆ ಯತ್ನಿಸಿದ ದುಷ್ಕರ್ಮಿಗಳು ತಡೆಯಲು ಬಂದ ತುಕ್ರಪ್ಪ ಶೆಟ್ಟಿ ಅವರ ಪತ್ನಿ ಗೀತಾ ಶೆಟ್ಟಿ ಅವರ ಮೇಲೆ ಚೂರಿಯಿಂದ ದಾಳಿ ಮಾಡಿದ್ದಾರೆ ಎನ್ನಲಾಗಿದೆ. ಗೀತಾ ಶೆಟ್ಟಿ ಗಂಭೀರ ಗಾಯಗೊಂಡಿದ್ದಾರೆ. ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಥಳಕ್ಕೆ ಧಾವಿಸಿಬಂದ ಪೊಲೀಸರು ಪರಿಶೀಲನೆಯನ್ನು ನಡೆಸಿದ್ದಾರೆ. ಮಾತ್ರವಲ್ಲ ದರೋಡೆಕೋರರ ಬಂಧನಕ್ಕೆ ಬಲೆ ಬೀಸಿದ್ದು, ರಸ್ತೆಗಳಲ್ಲಿ ನಾಕಾಬಂದಿ ಹಾಕಲಾಗಿದೆ. ಘಟನೆಯ ಸುದ್ದಿ ತಿಳಿಯುತ್ತಿದ್ದಂತೆಯೇ ಅಪಾರ ಸಂಖ್ಯೆಯಲ್ಲಿ ಜನರು ಆಗಮಿಸುತ್ತಿದ್ದು, ಜನರಲ್ಲಿ ಆತಂಕ ಸೃಷ್ಟಿಸಿದೆ.

- Advertisement -

Related news

error: Content is protected !!