- Advertisement -
- Advertisement -
ಕೋಲಾರ: ಕಾಲು ಜಾರಿ ಕೆರೆಗೆ ಬಿದ್ದು ತಾಯಿ ಮಗು ಮೃತಪಟ್ಟ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಕೋಡಿಪಲ್ಲಿ ಗ್ರಾಮದಲ್ಲಿ ನಡೆದಿದೆ.
ಮೃತಪಟ್ಟವರನ್ನು ಶ್ರೀನಿವಾಸಪುರ ಪಟ್ಟಣದ ಮಾರುತಿ ನಗರದ ನಿವಾಸಿಗಳಾದ ಗೀತಾ (26) ಯಶವಂತ್ (6) ಎಂದು ಗುರುತಿಸಲಾಗಿದೆ.
ಕೋಡಿಪಲ್ಲಿ ಗ್ರಾಮದ ಸಂಬಂಧಿಕರ ಮನೆಗೆ ಬಂದಿದ್ದ ವೇಳೆ ಯಶವಂತ್ ಕಾಲು ಜಾರಿ ಕೆರೆಗೆ ಬಿದ್ದಿದ್ದು, ಆತನನ್ನು ರಕ್ಷಿಸಲು ಹೋದ ಗೀತಾ ಕೂಡ ನೀರುಪಾಲುಗಿದ್ದಾರೆ. ಗೌನಿಪಲ್ಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
- Advertisement -