- Advertisement -
- Advertisement -
ಕೋಲಾರ: ಕೋಲಾರ ಜಿಲ್ಲೆಯಲ್ಲಿ ಚಿನ್ನದ ಗಣಿಗಾರಿಕೆ ನಡೆಸಲು ಕೇಂದ್ರ ಸರ್ಕಾರ ಗ್ರಿನ್ ಸಿಗ್ನಲ್ ಕೊಟ್ಟಿದೆ. ಚಿನ್ನದ ನಿಕ್ಷೇಪಗಳು ಎಲ್ಲೆಲ್ಲಿ ಇವೆ ಎಂಬುದರ ಬಗ್ಗೆ ಪತ್ತೆ ಕಾರ್ಯ ನಡೆದಿದ್ದು. ಚಿನ್ನದ ಸಾಂಧ್ರತೆ ಎಷ್ಟಿದೆ ಅನ್ನೋ ಬಗ್ಗೆಯೂ ಪರೀಕ್ಷೆ ನಡೆಸಲಾಗಿದೆ.
ಈ ಬಗ್ಗೆ ಗಣಿ ಸಚಿವಾಲಯ ಕೇಂದ್ರ ಸರ್ಕಾರಕ್ಕೆ ವರದಿಯನ್ನೂ ಸಲ್ಲಿಸಿದ್ದು ಚಿನ್ನದ ಗಣಿ ಆರಂಭಕ್ಕೆ ಸ್ಥಳ ಪ್ರಶಸ್ತವಾಗಿದೆ ಅಂತಾ ವರದಿಯಲ್ಲಿ ತಿಳಿಸಲಾಗಿದೆ. ಹೀಗಾಗಿ 20 ವರ್ಷಗಳಿಂದ ಸ್ಥಗಿತಗೊಂಡಿದ್ದ ಗಣಿಗಾರಿಕೆ ಆರಂಭಿಸಲು ಕೇಂದ್ರ ಮುಂದಾಗಿದೆ. ಕೆಜಿಎಫ್ ಭೂಮಿಯ ಮಣ್ಣಿನಲ್ಲಿ ಹೇರಳವಾಗಿ ಚಿನ್ನದ ನಿಕ್ಷೇಪ ವಿರುವುದು ಖಚಿತವಾಗಿದೆ.
- Advertisement -