- Advertisement -
- Advertisement -
ಕೋಲಾರ(ನ.2): ಕ್ಷುಲ್ಲಕ ಕಾರಣಕ್ಕೆ ಬಾಲಕನೋರ್ವ ತನ್ನ ಚಿಕ್ಕಪ್ಪನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಜಿಲ್ಲೆಯ ಮಾಲೂರು ತಾಲೂಕಿನ ಬೆನ್ನಘಟ್ಟ ಗ್ರಾಮದಲ್ಲಿ ನಡೆದಿದೆ.
ಬೆನ್ನಘಟ್ಟ ಗ್ರಾಮದ ವಿಜಯ್ ಕುಮಾರ್ ಕೊಲೆಯಾದ ವ್ಯಕ್ತಿ. ಈತನ ಅಣ್ಣನ ಮಗ ಕುಡಿದ ಅಮಲಿನಲ್ಲಿ ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಕಳೆದ ರಾತ್ರಿ ವಿಜಯ್ ಕುಮಾರ್ ಹಾಗೂ ಆರೋಪಿ ಬಾಲಕ ಇಬ್ಬರು ಕಂಠಪೂರ್ತಿ ಕುಡಿದು ಕ್ಷುಲ್ಲಕ ಕಾರಣಕ್ಕೆ ತಮ್ಮ ಮನೆ ಬಳಿ ಜಗಳ ಮಾಡಿಕೊಂಡಿದ್ದಾರೆ.
ಇಬ್ಬರು ಅವಾಚ್ಯ ಶಬ್ದಗಳಿಂದ ನಿಂದಿಸಿಕೊಂಡು ಕೈ ಕೈ ಮಿಲಾಯಿಸಿದ್ದಾರೆ. ಇದಾದ ಬಳಿಕ ನಿದ್ದೆಗೆ ಜಾರಿದ ವಿಜಯ್ ಕುಮಾರ್ ಮೇಲೆ ಬಾಲಕ ದಾಳಿ ಮಾಡಿ ಕುತ್ತಿಗೆಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. ವಿಷಯ ತಿಳದ ಗ್ರಾಮಸ್ಥರು ಆರೋಪಿಯನ್ನು ಹಿಡಿದು ಮಾಲೂರು ಪೊಲಿಸರಿಗೆ ಒಪ್ಪಿಸಿದ್ದಾರೆ.
- Advertisement -