


ಕೋಲ್ಕತ್ತಾ: ಮಾಜಿ ರೈಲ್ವೆ ಸಚಿವ ಮತ್ತು ಒಂದು ಕಾಲದಲ್ಲಿ ತೃಣಮೂಲ ಕಾಂಗ್ರೆಸ್ನ ಎರಡನೇ ಕಮಾಂಡರ್ ಆಗಿದ್ದ ಮುಕುಲ್ ರಾಯ್ (71)ಹೃದಯಾಘಾತದಿಂದ ನಿಧನರಾದರು.
ರಾಯ್ ಅವರನ್ನು ಕೋಲ್ಕತ್ತಾದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿತ್ತು. ನಿನ್ನೆ ರಾತ್ರಿ ಸುಮಾರು 1:30 ರ ಸುಮಾರಿಗೆ ಅವರಿಗೆ ತೀವ್ರ ಹೃದಯಾಘಾತವಾಯಿತು. ವೈದ್ಯರ ಪ್ರಯತ್ನಗಳ ಹೊರತಾಗಿಯೂ ಅವರು ಬದುಕುಳಿಯಲು ಸಾಧ್ಯವಾಗಲಿಲ್ಲ ಎಂದು ಅವರ ಮಗ ಸುಭ್ರಾಂಗ್ಶು ರಾಯ್ ತಿಳಿಸಿದ್ದಾರೆ.
ಮೂತ್ರಪಿಂಡದ ತೊಂದರೆಗಳು ಸೇರಿದಂತೆ ಹಲವು ದೈಹಿಕ ಸಮಸ್ಯೆಗಳಿಂದಾಗಿ ದೀರ್ಘಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಅವರನ್ನು ಆಗಾಗ ಆಸ್ಪತ್ರೆಗೆ ಸೇರಿಸಬೇಕಾಗಿತ್ತು. ಕೋಲ್ಕತ್ತಾದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಭಾನುವಾರ ತಡರಾತ್ರಿ ಅವರು ಕೊನೆಯುಸಿರೆಳೆದರು.ರಾಯ್ ಅವರು ತೃಣಮೂಲ ಕಾಂಗ್ರೆಸ್ ಪಕ್ಷದ ಸ್ಥಾಪಕ ಸದಸ್ಯರಲ್ಲಿ ಒಬ್ಬರಾಗಿದ್ದರು. ಒಂದು ಕಾಲದಲ್ಲಿ ‘ಬಂಗಾಳ ರಾಜಕೀಯದ ಚಾಣಕ್ಯ’ ಆಗಿದ್ದರು. ಮಮತಾ ಬ್ಯಾನರ್ಜಿ ಅವರ ಆಪ್ತರಾಗಿದ್ದ ಅವರು ವೈಯಕ್ತಿಕ ಮತ್ತು ರಾಜಕೀಯ ಜೀವನದಲ್ಲಿ ಸಾಕಷ್ಟು ಏರಿಳಿತಗಳನ್ನು ಕಂಡಿದ್ದರು ಎಂದು ವರದಿ ಮೂಲಕ ತಿಳಿದು ಬಂದಿದೆ.








