ಉಡುಪಿ: ದಕ್ಷಿಣ ಭಾರತದ ಪ್ರಸಿದ್ಧ ದೇವಿ ದೇವಸ್ಥಾನ ಕೊಲ್ಲೂರು ಮೂಕಾಂಬಿಕೆ ಸನ್ನಿಧಿಯಲ್ಲಿ ಸರ್ವ ಸೇವೆಗಳು ಸೋಮವಾರದಿಂದ ಆರಂಭವಾಗಲಿದೆ.ಕೊರೊನಾ ಮಾಹಮಾರಿ ಸೊಂಕಿನ ಹಿನ್ನೆಲೆಯಲ್ಲಿ ಹಾಗೂ ಲಾಕ್ಡೌನ್ ಆಗಿರೋದರಿಂದ ದೇವಸ್ಥಾನದಲ್ಲಿ ಯಾವುದೇ ಸೇವೆಗಳು ಭಕ್ತರಿಗೆ ಲಭ್ಯವಿರಲಿಲ್ಲ. ಹೀಗಾಗಿ ಕಳೆದ 5 ತಿಂಗಳಿಂದ ಕಾತುರರಾಗಿದ್ದ ಮೂಕಾಂಬಿಕಾ ಭಕ್ತರಿಗೆ ಈ ಆದೇಶ ಹರ್ಷ ತಂದಿದೆ.


ಮೂಕಾಂಬಿಕಾ ಸನ್ನಿಧಾನದಲ್ಲಿ ಕುಂಕುಮಾರ್ಚನೆ, ಲಡ್ಡು ಪ್ರಸಾದ ತುಲಾಭಾರ ಸೇವೆಗಳು ಆರಂಭವಾಗಲಿದೆ. ಕೋವಿಡ್ 19 ನಿಯಮ ಪ್ರಕಾರ ಚಂಡಿಕಾಹೋಮ, ಬೆಳ್ಳಿ ರಥ, ಬಂಗಾರದ ರಥ ಸೇವೆ ನಡೆಸುವುದು ದೇವಸ್ಥಾನಕ್ಕೆ ಸವಾಲಾಗಿದೆ. ಈ ಸೇವೆಗಳಲ್ಲಿ ಎಷ್ಟು ಜನರಿಗೆ ಅವಕಾಶ ಕೊಡಬೇಕು ಎಂಬ ಬಗ್ಗೆ ದೇವಸ್ಥಾನಕ್ಕೆ ಸಾಕಷ್ಟು ಗೊಂದಲ ಇದೆ. ಇನ್ನೆರಡು ದಿನಗಳಲ್ಲಿ ಈ ಬಗ್ಗೆ ಅರ್ಚಕರು ಜಿಲ್ಲಾಡಳಿತ ಚರ್ಚೆ ನಡೆಸಿ ನಿಯಮಗಳನ್ನು ರೂಪಿಸಲಿದ್ದಾರೆ.


ಕೊಲ್ಲೂರು ಮೂಕಾಂಬಿಕ ದೇವಸ್ಥಾನಕ್ಕೆ ಮಧ್ಯಾಹ್ನ ಬರುವ ಭಕ್ತರಿಗೆ ಅನ್ನ ಪ್ರಸಾದ ವ್ಯವಸ್ಥೆ ಇದೆ. ರಾತ್ರಿ ಊಟದ ವ್ಯವಸ್ಥೆ ಸದ್ಯಕ್ಕೆ ಇಲ್ಲ ಎಂದು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ಕಾರ್ಯನಿರ್ವಹಣಾ ಅಧಿಕಾರಿ ಮಾಹಿತಿ ನೀಡಿದ್ದಾರೆ.
