- Advertisement -
- Advertisement -
ವಿಟ್ಲ: ಕೊಳ್ನಾಡು ಗ್ರಾಮದ ಕಾಡುಮಠ ಎಂಬಲ್ಲಿ ಖಾಸಗಿ ರಬ್ಬರ್ ತೋಟದಲ್ಲಿ ಕೇರಳ ಮೂಲದ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕೇರಳ ರಾಜ್ಯದ ಕಣ್ಣೂರು ಇರುವಸ್ಯ ನಿವಾಸಿ ಸಲ್ಮೋಯಿ ತೋಮಸ್(55) ಆತ್ಮಹತ್ಯೆಗೆ ಶರಣಾದವರು. ಉದ್ಯಮಿಯೊಬ್ಬರಿಗೆ ಸೇರಿದ ರಬ್ಬರ್ ತೋಟದಲ್ಲಿ ರಬ್ಬರ್ ಕಾರ್ಮಿಕ ಕೇರಳದ ಈತ ಹಲವಾರು ವರ್ಷಗಳಿಂದ ರಬ್ಬರ್ ಕಾರ್ಮಿಕನಾಗಿ ದುಡಿಯುತ್ತಿದ್ದು. ಆತ್ಮಹತ್ಯೆಗೆ ಕಾರಣ ಇನ್ನೂ ತಿಳಿದುಬಂದಿಲ್ಲ. ಎರಡು ತಿಂಗಳುಗಳಿಂದ ಮನೆಗೆ ಹೋಗಿರಲಿಲ್ಲ ಎಂದು ತಿಳಿದು ಬಂದಿದೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ವಿಟ್ಲ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
- Advertisement -