- Advertisement -
- Advertisement -
ವಿಟ್ಲ: ಕೊಳ್ನಾಡು ಮಹಾಶಕ್ತಿಕೇಂದ್ರ ಹಾಗೂ ರೈತಮೋರ್ಚಾ ವತಿಯಿಂದ ವಿಷ್ಣುಮೂರ್ತಿ ಭಜನಾಮಂದಿರ, ಮಂಕುಡೆಯಲ್ಲಿ ದೇಶಕ್ಕೋಸ್ಕರ ಪ್ರಾಣಾರ್ಪಣೆಗೈದ ಪಂಡಿತ್ ದೀನ್ ದಯಾಳ್ ಉಪಾದ್ಯಾಯ ಅವರ ಸ್ಮರಣಾ ಕಾರ್ಯಕ್ರಮ ನೆರವೇರಿತು.
ಕಾರ್ಯಕ್ರಮದಲ್ಲಿ ಮಹಾಶಕ್ತಿಕೇಂದ್ರ ಅಧ್ಯಕ್ಷರಾದ ಶಿವಪ್ರಸಾದ್ ಶೆಟ್ಟಿ ಅನೆಯಲಗುತ್ತು, ತಾಲೂಕು ಪಂಚಾಯತ್ ಸದಸ್ಯ ಕುಲ್ಯಾರು ನಾರಾಯಣ ಶೆಟ್ಟಿ, ಮಂಡಲ ಬಿಜೆಪಿ ಉಪಾಧ್ಯಕ್ಷ ಜಯರಾಮ್ ನಾಯ್ಕ್ ಕುಂಟ್ರಕಲ, ಮಂಡಲ ರೈತಮೋರ್ಚಾ ಅಧ್ಯಕ್ಷ ವಿಶ್ವನಾಥ್ ಪೂಜಾರಿ ಕಟ್ಟತ್ತಿಲ ಕೋಡಿ , ಕೊಳ್ನಾಡು ಗ್ರಾಮದ ಚುನಾವಣಾ ಪ್ರಭಾರಿಗಳಾದ ರಾಜಾರಾಮ್ ಹೆಗ್ಡೆ ಕುದ್ರಿಯ, ಮಂಡಲ ಬಿಜೆಪಿ ಸದಸ್ಯ ಬಾಲಕೃಷ್ಣ ಸೆರ್ಕಳ, ಮಹಾಶಕ್ತಿಕೇಂದ್ರ ಕಾರ್ಯದರ್ಶಿ ಲೋಹಿತ್, ಪ್ರಶಾಂತ್ ಶೆಟ್ಟಿ ಅಗರಿ ಪಕ್ಷದ ವಿವಿಧ ಜವಾಬ್ದಾರಿಯುತ ನಾಯಕರು, ಕಾರ್ಯಕರ್ತರು ಉಪಸ್ಥಿತರಿದ್ದರು.
- Advertisement -