ವಿಟ್ಲ: ಕೋಲ್ಪೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ ಜ.17ರಿಂದ 19 ವರೆಗೆ ಬ್ರಹ್ಮಶ್ರಿ ಕೆಮ್ಮಿಂಜೆ ನಾಗೇಶ ತಂತ್ರಿ ಯವರ ನೇತೃತ್ವದಲ್ಲಿ ಜರುಗಲಿದೆ.

ಜ.10 ಆದಿತ್ಯವಾರ ಬೆಳಿಗ್ಗೆ ಪ್ರಧಾನ ಅರ್ಚಕರಾದ ಗೋವಿಂದ ಜೊಯಿಷರ ಪೌರೋಹಿತ್ಯ ದಲ್ಲಿ ಗೊನೆ ಮುಹೂರ್ತ ಕಾರ್ಯಕ್ರಮ ನಡೆಯಿತು. ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಸುರೇಶ್ ಮುಕ್ಕುಡ, ವಿಶ್ವಸ್ಥ ಮಂಡಳಿ ಮಾಜಿ ಅಧ್ಯಕ್ಷರಾದ ರಾಜರಾಮ್ ಶೆಟ್ಟಿ ಕೋಲ್ಪೆ ಗುತ್ತು, ಪ್ರಪುಲ್ ಚಂದ್ರ ಪಿ.ಜಿ ಕೋಲ್ಪೆ, ಸಹಕಾರ ಭಾರತೀಯ ರಾಷ್ಟ್ರೀಯ ಸಹ ಸಂಘಟನಾ ಕಾರ್ಯದರ್ಶಿ ಕೊಂಕೋಡಿ ಪದ್ಮನಾಭ, ಸುಧೀರ್ ಕುಮಾರ್ ಶೆಟ್ಟಿ, ಜಗದೀಶ್ ದೇವಸ್ಯ, ಇಡ್ಕಿದು ಗ್ರಾ.ಪಂ.ಸದಸ್ಯ ಪುರುಷೋತ್ತಮ ಕೋಲ್ಪೆ.


ವ್ಯವಸ್ಥಾಪನ ಸಮಿತಿ ಸದಸ್ಯರಾದ ಪ್ರಕಾಶ್ ಕೆ.ಎಸ್.ಉರಿಮಜಲು, ವಿಜಯಕುಮಾರ್ ಗೌಡ ಸೂರ್ಯ, ಚಂದ್ರಶೇಖರ್ ಕಂಬಳಿ ಅರ್ಕೆಚ್ಚಾರು, ದೇಜಪ್ಪ ಕೋಲ್ಪೆ, ಸುರೇಶ್ ಪೂಜಾರಿ ಸೂರ್ಯ, ಶಶಿಧರ್ ಭಂಡಾರಿ, ವಿ.ಕೆ.ಕುಟ್ಟಿ,ಉರಿಮಜುಲ, ಉಷಾ ಮುಂಡ್ರಬೈಲು, ಶಶಿಪ್ರಭಾ ಮಿತ್ತೂರು, ಹಾಗೂ ಕ್ಷೇತ್ರದ ಹಲವಾರು ಭಕ್ತರು ಉಪಸ್ಥಿತರಿದ್ದರು.











