Thursday, April 25, 2024
spot_imgspot_img
spot_imgspot_img

ಪ್ರೀತಿಸಿ ಮದುವೆಯಾಗಿದ್ದ ಜೋಡಿ ಮೇಲೆ ಅಪರಿಚಿತರಿಂದ ದಾಳಿ- ಪತ್ನಿ ಸಾವು, ಪತಿ ಗಂಭೀರ

- Advertisement -G L Acharya panikkar
- Advertisement -

ಕೊಪ್ಪಳ: ಆರು ತಿಂಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ಜೋಡಿ ಮೇಲೆ ಅಪರಿಚಿತರು ದಾಳಿ ನಡೆಸಿರುವ ಭಯಾನಕ ಘಟನೆ ಕೊಪ್ಪಳ ಜಿಲ್ಲೆಯ ಕಾರಟಗಿ ಪಟ್ಟಣದಲ್ಲಿ ನಡೆದಿದೆ. ದಾಳಿಯಲ್ಲಿ ಪತ್ನಿ ಸಾವನ್ನಪ್ಪಿದ್ದು, ಗಂಭೀರಾವಾಗಿ ಗಾಯಗೊಂಡಿರುವ ಪತಿಯನ್ನ ಆಸ್ಪತ್ರೆಗೆ ದಾಖಲಿಸಲಾಗಿದೆ.

ತ್ರಿವೇಣಿ (35) ಸ್ಥಳದಲ್ಲಿ ಮೃತರಾಗಿದ್ದು, ಪತಿ ವಿನೋದ್ (30) ಗಂಭೀರವಾಗಿ ಗಾಯಗೊಂಡಿದ್ದಾರೆ. ಮೂಲತಃ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ನಿವಾಸಿಯಾಗಿದ್ದ ದಂಪತಿ ಆರು ತಿಂಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದರು. ಇಬ್ಬರು ಬ್ಯಾಂಕ್ ಉದ್ಯೋಗಿಗಳಾಗಿದ್ದು, ಕಾರಟಗಿಯಲ್ಲಿ ವಾಸವಾಗಿದ್ದರು. ವಿನೋದ್ ಕಾರಟಗಿಯ ಐಡಿಎಫ್‍ಸಿ ಬ್ಯಾಂಕ್ ಮ್ಯಾನೇಜರ್ ಆಗಿದ್ದು, ತ್ರಿವೇಣಿ ಬಳ್ಳಾರಿ ಸಿರಗುಪ್ಪದ ಖಾಸಗಿ ಬ್ಯಾಂಕ್ ನಲ್ಲಿ ಕಾರ್ಯನಿರ್ವಹಿಸುತ್ತಿದ್ದರು.

ಇಂದು ತಮ್ಮ ಕೆಲಸ ಮುಗಿಸಿಕೊಂಡು ದಂಪತಿ ಮನೆಗೆ ಹಿಂದಿರುಗುತ್ತಿದ್ದ ವೇಳೆ ಬೈಕಿನಲ್ಲಿ ಬಂದ ಅಪರಿಚಿತರು ರಾಡ್ ನಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ. ಹಲ್ಲೆಯ ಪರಿಣಾಮ ತ್ರೀವೇಣಿ ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ. ಸದ್ಯ ಗಾಯಾಳು ವಿನೋದ್ ಅವರನ್ನ ಹೆಚ್ಚಿನ ಚಿಕಿತ್ಸೆಗಾಗಿ ಗಂಗಾವತಿಯಿಂದ ಬಳ್ಳಾರಿಗೆ ರವಾನಿಸಲಾಗಿದೆ.


ಘಟನಾ ಸ್ಥಳಕ್ಕೆ ಕಾರಟಗಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ವಿನೋದ್ ಮತ್ತು ತ್ರಿವೇಣಿ ಮುಧೋಳ ತಾಲೂಕಿನ ಉತ್ತೂರು ಮತ್ತು ಕಾಕನಕಟ್ಟೆ ಗ್ರಾಮದವರೆಂದು ತಿಳಿದು ಬಂದಿದೆ. ಇಬ್ಬರ ಮದುವೆಗೆ ಕುಟುಂಬಸ್ಥರು ವಿರೋಧ ವ್ಯಕ್ತಪಡಿಸಿದ್ದರು ಎನ್ನಲಾಗ್ತಿದ್ದು, ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ. ದಂಪತಿ ಮನೆಯವರ ವಿರೋಧದ ನಡುವೆಯೂ ಮದುವೆ ಆಗಿದ್ದರು.

- Advertisement -

Related news

error: Content is protected !!