Friday, June 27, 2025
spot_imgspot_img
spot_imgspot_img

ಕೋಟ: ಚಿನ್ನದ ಸರ ಕಳವು ಪ್ರಕರಣ; ಆರೋಪಿಯ ಬಂಧನ..!

- Advertisement -
- Advertisement -

ಕೋಟ: ಮನೆ ಮಂದಿ ದೇವಸ್ಥಾನಕ್ಕೆ ಹೋಗಿದ್ದ ವೇಳೆ ಬಾಗಿಲು ಮುರಿದು ಮನೆಗೆ ನುಗ್ಗಿ ವೃದ್ಧೆಯ ಚಿನ್ನ ಕಳವು ಮಾಡಿದ ಪ್ರಕರಣದ ಆರೋಪಿಯನ್ನು ಬಂಧಿಸಿದ ಘಟನೆ ಕೋಟದಲ್ಲಿ ನಡೆದಿದೆ.

ಬಂಧಿತ ಆರೋಪಿಯನ್ನು ಕುಂದಾಪುರದ ಮಣೂರು ನಿವಾಸಿ ಪ್ರವೀಣ್ ಕುಮಾರ್ ಶೆಟ್ಟಿ (38) ಎಂದು ಗುರುತಿಸಲಾಗಿದೆ.

ಕೋಟ ಪೊಲೀಸರು ತೆಕ್ಕಟ್ಟೆ ಬಳಿ ಆತನನ್ನು ಬಂಧಿಸಿ ಆತನಿಂದ 25 ಗ್ರಾಂ ತೂಕದ ಸುಮಾರು 2.5 ಲಕ್ಷ ರೂಪಾಯಿ ಮೌಲ್ಯದ ಚಿನ್ನದ ಸರವನ್ನು ವಶಪಡಿಸಿಕೊಂಡಿದ್ದಾರೆ.

ಮಾರ್ಚ್ 20 ರಂದು ರಾತ್ರಿ ಮಣೂರು ಕೊಯೂರು ಎಂಬಲ್ಲಿ ಈ ಕಳವು ಪ್ರಕರಣ ನಡೆದಿತ್ತು. ಧಾರವಾಡದಲ್ಲಿ ಉದ್ಯಮಿಯಾಗಿರುವ ಶ್ರೀಧರ್ ಅವರು ಕುಟುಂಬದವರ ಜತೆ ಸಮೀಪದ ದೇವಸ್ಥಾನಕ್ಕೆ ತೆರಳಿದ್ದ ವೇಳೆ ಮನೆಯಲ್ಲಿದ್ದ 92 ವರ್ಷ ಪ್ರಾಯದ ವೃದ್ಧೆಯ ಸರವನ್ನು ಆರೋಪಿ ಕಳವು ಮಾಡಿದ್ದ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿತ್ತು. ತನಿಖೆ ಆರಂಭಿಸಿದ ಪೊಲೀಸರಿಗೆ ಕ್ರಿಮಿನಲ್ ಹಿನ್ನೆಲೆ ಇರುವ ಪ್ರವೀಣ್ ಕುಮಾ‌ರ್ ಶೆಟ್ಟಿ ಜಾತ್ರೆಗೆ ತೆರಳಿರುವ ವಿಷಯ ಗೊತ್ತಾಗಿತ್ತು. ಆತನನ್ನು ಕರೆಸಿ ವಿಚಾರಣೆ ನಡೆಸಿ ಮೊಬೈಲ್ ನೆಟ್ ವರ್ಕ್ ಮತ್ತಿತರ ಸಾಕ್ಷ್ಯಗಳ ಆಧಾರದಲ್ಲಿ ಪರಿಶೀಲನೆ ನಡೆಸಿದಾಗ ಆತನೇ ಕಳವು ಕೃತ್ಯ ನಡೆಸಿರುವುದು ಬೆಳಕಿಗೆ ಬಂದಿತ್ತು.

ಆರೋಪಿ ಪ್ರವೀಣ್ 10 ವರ್ಷಗಳ ಹಿಂದೆ ಹೈದರಾಬಾದ್‌ನಲ್ಲಿ ವಾಸವಾಗಿದ್ದು, ಅಲ್ಲಿಯೂ ಆತನ ಮೇಲೆ ಅನೇಕ ಕ್ರಿಮಿನಲ್ ಪ್ರಕರಣಗಳು ದಾಖಲಾಗಿದ್ದವು. ಬಳಿಕ ಆತ ತನ್ನ ಹುಟ್ಟಿದ ಊರು ಮಣೂರಿಗೆ ವಾಪಾಸಾಗಿದ್ದ ಎಂಬ ಬಗ್ಗೆ ಮಾಹಿತಿ ಲಭ್ಯವಾಗಿದೆ.

ಕೋಟ ಪೊಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್‌ಗಳಾದ ರಾಘವೇಂದ್ರ ಸಿ ಮತ್ತು ಸುಧಾ ಪ್ರಭು, ಜಯಪ್ರಕಾಶ್, ಎ.ಎಸ್.ಐ. ಮತ್ತು ಹೆಡ್ ಕಾನ್ಸ್ ಟೆಬಲ್ ರೇವತಿ, ಕೃಷ್ಣ, ಶ್ರೀಧರ್ ಹಾಗೂ ಕಾನ್ಸ್ ಟೇಬಲ್ ರಾಘವೇಂದ್ರ ಮತ್ತು ವಿಜಯೇಂದ್ರ ಅವರ ತಂಡ ಈ ಕಾರ್ಯಾಚರಣೆ ನಡೆಸಿತು.

- Advertisement -

Related news

error: Content is protected !!