Thursday, April 25, 2024
spot_imgspot_img
spot_imgspot_img

ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಕೋಟ ಶ್ರೀನಿವಾಸ ಪೂಜಾರಿ ಬಂಟ್ವಾಳ ತಾಲೂಕು ಸರಕಾರಿ ಆಸ್ಪತ್ರೆಗೆ ಬೇಟಿ

- Advertisement -G L Acharya panikkar
- Advertisement -

ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಕೋಟ ಶ್ರೀನಿವಾಸ ಪೂಜಾರಿಯವರು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ರವರ ಜತೆ ಈ ದಿನ ಬಂಟ್ವಾಳ ತಾಲೂಕು ಸರಕಾರಿ ಆಸ್ಪತ್ರೆಗೆ ಬೇಟಿ ನೀಡಿದರು.


ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ಪುಷ್ಪಲತಾರವರು ಆಸ್ಪತ್ರೆಯ ಬಗ್ಗೆ ಸಚಿವರಿಗೆ ಮಾಹಿತಿ ನೀಡಿದರು. ಪ್ರಸ್ತುತ 10 ಕೊರೊನಾ ರೋಗಿಗಳು ಚಿಕಿತ್ಸೆ ಪಡೆಯತ್ತಿದ್ದು ಈ ವರೆಗೆ 70 ಕೊರೊನಾ ಪೀಡಿತರು ಚಿಕಿತ್ಸೆ ಪಡೆದು ಗುಣಮುಖರಾಗಿ ತೆರಳಿರುವುದಾಗಿ ತಿಳಿಸಿದರು. ಆಸ್ಪತ್ರೆಯ ಕೆಲವೊಂದು ಬೇಡಿಕೆಗಳನ್ನು ಸಚಿವರ ಗಮನಕ್ಕೆ ತಂದರು.


ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ರವರು ಬಂಟ್ವಾಳ ಸರಕಾರಿ ಆಸ್ಪತ್ರೆ ಯಲ್ಲಿ ಡಯಾಲಿಸಿಸ್ ಚಿಕಿತ್ಸೆಗೆ ಅತೀ ಹೆಚ್ಚಿನ ಬೇಡಿಕೆ ಇದ್ದು 2 ಯಂತ್ರಗಳು ದಿನವೊಂದಕ್ಕೆ 10 ರೋಗಿ ಗಳಿಗೆ ಮಾತ್ರ ಚಿಕಿತ್ಸೆ ನೀಡಲು ಸಾಧ್ಯವಾಗುತ್ತಿದೆ. ತಾಲೂಕಿನ ಯಾವುದೇ ಆಸ್ಪತ್ರೆಯಲ್ಲಿ ಈ ವ್ಯವಸ್ಥೆ ಇಲ್ಲದ ಕಾರಣ ರೋಗಿಗಳು ದುಬಾರಿ ಖರ್ಚು ಮಾಡಿ ಮಂಗಳೂರಿಗೆ ತೆರಳಬೇಕಾಗುವುದು.ಅಲ್ಲಿಯೂ ರೋಗಿಗಳ ಸಂಖ್ಯೆ ಹೆಚ್ಚಿದ್ದು ಬಂಟ್ವಾಳ ಆಸ್ಪತ್ರೆ ಗೆ 2 ಡಯಾಲಿಸಿಸ್ ಯಂತ್ರ ನೀಡುವ ಬಗ್ಗೆ ಮಾನ್ಯ ಸಚಿವರಲ್ಲಿ ತಿಳಿಸಿದಾಗ ಮುಜರಾಯಿ ಇಲಾಖೆಯ ಮೂಲಕ ತಾಲೂಕಿನ ‘ಎ’ ದರ್ಜೆ ದೇವಸ್ಥಾನದಿಂದ ಒಂದು ವಾರದ ಒಳಗಾಗಿ ಇದನ್ನು ನೀಡಲು ಕ್ರಮ ಕೈಗೊಳ್ಳುವುದಾಗಿ ಸಚಿವರು ಭರವಸೆ ನೀಡಿದರು.


ಬೂಡ ಅಧ್ಯಕ್ಷ ದೇವದಾಸ್ ಶೆಟ್ಟಿ , ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿ ನಿರ್ದೇಶಕಿ ಸುಲೋಚನ ಜಿ.ಕೆ ಭಟ್ ಉಪಸ್ಥಿತರಿದ್ದರು.

- Advertisement -

Related news

error: Content is protected !!