Thursday, April 25, 2024
spot_imgspot_img
spot_imgspot_img

ಸಚಿವ ಕೋಟ ಶ್ರೀನಿವಾಸ ಪೂಜಾರಿಯವರ ಕಾರು ಮತ್ತು ಕೆ ಎಸ್ ಆರ್ ಟಿ ಸಿ ಬಸ್ ನಡುವೆ ಅಪಘಾತ!

- Advertisement -G L Acharya panikkar
- Advertisement -

ರಾಮನಗರ: ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರ ಕಾರು ಹಾಗೂ ಕೆಎಸ್​ಆರ್​ಟಿಸಿ ಬಸ್​ ನಡುವೆ ಜಿಲ್ಲೆಯ ಕುಂಬಳಗೋಡು ಬಳಿಯ ನೈಸ್ ರಸ್ತೆ ಬಳಿ ಅಪಘಾತ ಸಂಭವಿಸಿದೆ.

ರವಿ ಶಂಕರ್ ಗುರೂಜಿ ಆಶ್ರಮಕ್ಕೆ ತೆರಳಿ ಸಚಿವ ಶ್ರೀನಿವಾಸ ಪೂಜಾರಿ ಅವರು ಬೆಂಗಳೂರು ಮಾರ್ಗವಾಗಿ ವಾಪಸ್​ ತೆರಳುತ್ತಿದ್ದರು . ಈ ವೇಳೆ ಅಪಘಾತ ಸಂಭವಿಸಿದ್ದು, ಚಾಲಕನ ಜಾಗರೂಕತೆ ಯಿಂದ ಯಾವುದೇ ಅಪಾಯವಾಗಿಲ್ಲ ಎಂಬ ಮಾಹಿತಿ ಲಭಿಸಿದೆ.

ಘಟನೆಯ ಬಳಿಕ ಸಚಿವರಿಗೆ ಕಾರಿನ ವ್ಯವಸ್ಥೆ ಮಾಡಿ ಬೆಂಗಳೂರಿನತ್ತ ಹೊರಟ್ಟಿದ್ದಾರೆ. ಕಾರಿನಲ್ಲಿ ಚಾಲಕ ಮತ್ತು ಸಚಿವರು ಇಬ್ಬರು ಮಾತ್ರ ಪ್ರಯಾಣಿಸುತ್ತಿದ್ದರು ಎಂಬ ಮಾಹಿತಿ ಲಭಿಸಿದೆ. ಬಸ್​ ಚಾಲಕ ಪ್ರಶಾಂತ್ ಕಾಲಿಗೆ ಸಣ್ಣ ಪ್ರಮಾಣದ ಗಾಯವಾಗಿದ್ದು ಆತನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

- Advertisement -

Related news

error: Content is protected !!