- Advertisement -
- Advertisement -
ರಾಮನಗರ: ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರ ಕಾರು ಹಾಗೂ ಕೆಎಸ್ಆರ್ಟಿಸಿ ಬಸ್ ನಡುವೆ ಜಿಲ್ಲೆಯ ಕುಂಬಳಗೋಡು ಬಳಿಯ ನೈಸ್ ರಸ್ತೆ ಬಳಿ ಅಪಘಾತ ಸಂಭವಿಸಿದೆ.
ರವಿ ಶಂಕರ್ ಗುರೂಜಿ ಆಶ್ರಮಕ್ಕೆ ತೆರಳಿ ಸಚಿವ ಶ್ರೀನಿವಾಸ ಪೂಜಾರಿ ಅವರು ಬೆಂಗಳೂರು ಮಾರ್ಗವಾಗಿ ವಾಪಸ್ ತೆರಳುತ್ತಿದ್ದರು . ಈ ವೇಳೆ ಅಪಘಾತ ಸಂಭವಿಸಿದ್ದು, ಚಾಲಕನ ಜಾಗರೂಕತೆ ಯಿಂದ ಯಾವುದೇ ಅಪಾಯವಾಗಿಲ್ಲ ಎಂಬ ಮಾಹಿತಿ ಲಭಿಸಿದೆ.
ಘಟನೆಯ ಬಳಿಕ ಸಚಿವರಿಗೆ ಕಾರಿನ ವ್ಯವಸ್ಥೆ ಮಾಡಿ ಬೆಂಗಳೂರಿನತ್ತ ಹೊರಟ್ಟಿದ್ದಾರೆ. ಕಾರಿನಲ್ಲಿ ಚಾಲಕ ಮತ್ತು ಸಚಿವರು ಇಬ್ಬರು ಮಾತ್ರ ಪ್ರಯಾಣಿಸುತ್ತಿದ್ದರು ಎಂಬ ಮಾಹಿತಿ ಲಭಿಸಿದೆ. ಬಸ್ ಚಾಲಕ ಪ್ರಶಾಂತ್ ಕಾಲಿಗೆ ಸಣ್ಣ ಪ್ರಮಾಣದ ಗಾಯವಾಗಿದ್ದು ಆತನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
- Advertisement -