Thursday, April 25, 2024
spot_imgspot_img
spot_imgspot_img

ಕೋಟಿ-ಚೆನ್ನಯರ ಬಗ್ಗೆ ಅವಹೇಳನಕಾರಿ ಹೇಳಿಕೆ- ಬ್ರಹ್ಮ ಬೈದರ್ಕಳ ಗರಡಿಗೆ ಭೇಟಿ ನೀಡಿ ತಪ್ಪು ಕಾಣಿಕೆ ಹಾಕಿ ಕ್ಷಮೆಯಾಚಿಸಿದ ಜಗದೀಶ್ ಅಧಿಕಾರಿ

- Advertisement -G L Acharya panikkar
- Advertisement -

ಮೂಡಬಿಡಿರೆ: ತುಳುನಾಡಿನ ಕಾರಣಿಕ ಪುರುಷರಾದ ಕೋಟಿ ಚೆನ್ನಯರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿ ವಿವಾದವನ್ನು ಮೈಗೆ ಎಳೆದುಕೊಂಡ ಬಿಜೆಪಿ ಮುಖಂಡ ಜಗದೀಶ್ ಅಧಿಕಾರಿ ಯವರು ಮೂಡುಬಿದರೆ ಸಮೀಪದ ಕೆಲ್ಲಪುತ್ತಿಗೆ ಬ್ರಹ್ಮ ಬೈದರ್ಕಳ ಗರಡಿಗೆ ಭೇಟಿ ನೀಡಿ ತಪ್ಪು ಕಾಣಿಕೆ ಹಾಕಿ ಕ್ಷಮೆಯಾಚಿಸಿದ್ದಾರೆ.

ಕೆಲ್ಲಪುತ್ತಿಗೆಯ ಶ್ರೀ ಕ್ಷೇತ್ರ ಭೂತರಾಜಗುಡ್ಡೆಯ ಶ್ರೀ ಧರ್ಮರಸು ದೈವ , ಕುಕ್ಕಿನಂತಾಯ, ಕೊಡಮಣಿತ್ತಾಯ, ಬ್ರಹ್ಮ ಬೈದರ್ಕಳ ಗರಡಿಗೆ ಭೇಟಿ ನೀಡಿ, ತಪ್ಪು ಕಾಣಿಕೆ ಸಲ್ಲಿಸಿ, ದೈವದ ಮುಂದೆ ಕ್ಷಮೆಯಾಚಿಸಿದ್ದಾರೆ.ತನ್ನ ಹೇಳಿಕೆಯಿಂದ ಬಿಲ್ಲವ ಸಮುದಾಯಕ್ಕೆ ನೋವಾಗಿದೆ. ಕಾಂಗ್ರೆಸ್ ಹಿರಿಯ ಮುಖಂಡ ಜನಾರ್ದನ ಪೂಜಾರಿ ಯವರು ಕೂಡ ನೊಂದಿದ್ದಾರೆ. ಹಾಗಾಗಿ ತಾನು ಕ್ಷಮೆಯಾಚನೆ ಮಾಡುತ್ತಿದ್ದೇನೆ.

ನನ್ನ ಮಾತಿನಿಂದ ಉಂಟಾದ ವಿವಾದಕ್ಕೆ ಕೋಟಿ ಚೆನ್ನಯರ ಗರಡಿಯಲ್ಲಿಯೇ ಬಂದು ನಿಂತು ಕ್ಷಮೆಯಾಚಿಸಿ, ತಪ್ಪು ಕಾಣಿಕೆ ಸಲ್ಲಿಸುವ ಮೂಲಕ ಎಲ್ಲಾ ವಿವಾದಗಳಿಗೆ ತಾನು ಇತಿಶ್ರೀ ನೀಡಲು ನಿರ್ಧರಿಸಿದ್ದೇನೆ.

ಶೀಘ್ರದಲ್ಲೇ ಕಾಂಗ್ರೆಸ್ ಹಿರಿಯ ಮುಖಂಡ ಜನಾರ್ದನ ಪೂಜಾರಿ ರವರ ನಿವಾಸಕ್ಕೆ ತೆರಳಿ ಅವರಲ್ಲೂ ಕ್ಷಮೆಯಾಚಿಸುತ್ತೇನೆ. ಕುದ್ರೋಳಿ ಹಾಗೂ ಗೆಜ್ಜೆಗಿರಿ ಕ್ಷೇತ್ರಕ್ಕೆ ತೆರಳಿ ತಪ್ಪು ಕಾಣಿಕೆ ಸಲ್ಲಿಸಿ, ಕ್ಷಮೆಯಾಚನೆ ಮಾಡುವುದಾಗಿಯೂ ಜಗದೀಶ್ ಅಧಿಕಾರಿ ಹೇಳಿದ್ದಾರೆ.

- Advertisement -

Related news

error: Content is protected !!