Friday, March 29, 2024
spot_imgspot_img
spot_imgspot_img

ಕೊಯಿಲ: ದ್ವಿಚಕ್ರ ವಾಹನ ಸವಾರ ನಿಯಂತ್ರಣ ತಪ್ಪಿದ ಪರಿಣಾಮ ಚಾಲಕ ಮೃತ್ಯು!

- Advertisement -G L Acharya panikkar
- Advertisement -

ಕಡಬ: ಸವಾರನ ನಿಯಂತ್ರಣ ತಪ್ಪಿದ ದ್ವಿಚಕ್ರ ವಾಹನವೊಂದು ರಸ್ತೆ ಬದಿಯ ಚರಂಡಿಗೆ ಉರುಳಿದ ಪರಿಣಾಮ ಸವಾರ ಮೃತಪಟ್ಟ ಘಟನೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕೊಯಿಲ ಎಂಬಲ್ಲಿ ಗುರುವಾರ ನಡೆದಿದೆ.

ಮೃತ ಸವಾರನನ್ನು ಕಡಬ ತಾಲೂಕಿನ ನೆಕ್ಕಿತ್ತಡ್ಕ ನಿವಾಸಿ ಅಬ್ಬಾಸ್ ಎಂಬವರ ಪುತ್ರ ಖಲೀಲ್ ಎಂದು ಗುರುತಿಸಲಾಗಿದೆ.

ಖಲೀಲ್ ಅವರು ತನ್ನ ಸ್ನೇಹಿತನ ದ್ವಿಚಕ್ರ ವಾಹನದಲ್ಲಿ ಉಪ್ಪಿನಂಗಡಿ ಕಡೆಗೆ ತೆರಳುತ್ತಿದ್ದಾಗ ಕೊಯಿಲ ಎಂಬಲ್ಲಿ ಚರಂಡಿಗೆ ಬಿದ್ದು ಈ ದುರ್ಘಟನೆ ಸಂಭವಿಸಿದೆ. ಮೃತದೇಹವನ್ನು ಉಪ್ಪಿನಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಇರಿಸಲಾಗಿದೆ. ಈ ಬಗ್ಗೆ ಇಲ್ಲಿನ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

- Advertisement -

Related news

error: Content is protected !!