Saturday, May 4, 2024
spot_imgspot_img
spot_imgspot_img

ಬಿಜೆಪಿಯಿಂದ ಕೆಎಸ್​ ಈಶ್ವರಪ್ಪ 6 ವರ್ಷ ಉಚ್ಚಾಟನೆ

- Advertisement -G L Acharya panikkar
- Advertisement -
This image has an empty alt attribute; its file name is creative2-1024x1024.jpeg

ಬಿಜೆಪಿಯಿಂದ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಅವರನ್ನು 6 ವರ್ಷಗಳ ಕಾಲ ಉಚ್ಚಾಟನೆ ಮಾಡಿ ರಾಜ್ಯ ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ್ ಆದೇಶ ಹೊರಡಿಸಿದ್ದಾರೆ.

ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದ ಕೆಎಸ್‌ ಈಶ್ವರಪ್ಪ, ತಮ್ಮ ನಾಮಪತ್ರವನ್ನು ಹಿಂಪಡೆಯಲು ಇಂದು ಕೊನೆಯ ದಿನವಾಗಿತ್ತು. ಆದರೆ, ಈಶ್ವರಪ್ಪ ನಾಮಪತ್ರವನ್ನು ಹಿಂಪಡೆಯಲು ನಿರಾಕರಿಸಿದ ಕಾರಣ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಿ ಆದೇಶ ಹೊರಡಿಸಲಾಗಿದೆ. ಇದರಿಂದಾಗಿ ಮುಂದಿನ ಆರು ವರ್ಷಗಳ ಕಾಲ ಅವರು ಬಿಜೆಪಿ ಪಕ್ಷದಡಿ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸುವಂತಿಲ್ಲ. ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಹಾಲಿ ಸಂಸದ ಬಿಜೆಪಿಯ ಬಿವೈ ರಾಘವೇಂದ್ರ ಹಾಗೂ ಕಾಂಗ್ರೆಸ್‌ನ ಗೀತಾ ಶಿವರಾಜ್‌ಕುಮಾರ್‌ಗೆ ಎದುರಾಳಿಯಾಗಿ ಈಶ್ವರಪ್ಪ ಸ್ಪರ್ಧೆ ಮಾಡಲಿದ್ದಾರೆ.

ಪುತ್ರ ಕೆ.ಇ.ಕಾಂತೇಶ್​ಗೆ ಹಾವೇರಿ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಕೆ.ಎಸ್.ಈಶ್ವರಪ್ಪ ಸ್ಪರ್ಧಿಸುತ್ತಿದ್ದಾರೆ. ಚುನಾವಣಾ ಕಣದಿಂದ ಹಿಂದೆ ಸರಿಯುವಂತೆ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ವಿಯಜೇಂದ್ರ ಮನವಿ ಮಾಡಿದ್ದರು. ಆದರೆ ಅಂತಿಮವಾಗಿ ಚುನಾವಣಾ ಕಣದಲ್ಲಿ ಉಳಿದಿದ್ದಾರೆ.

ಬಂಡಾಯ ಎದ್ದಿರುವ ಈಶ್ವರಪ್ಪ ಮನವೊಲಿಕೆಗೆ ಕೇಂದ್ರ ನಾಯಕರ ತಂಡ, ರಾಜ್ಯ ನಾಯಕರು, ಸ್ಥಳೀಯರ ಮುಖಂಡರು, ಕೊನೆ ಕ್ಷಣದಲ್ಲಿ RSS ನಾಯಕರೂ ಸಹ ಮನವೊಲಿಕೆಗೆ ಮುಂದಾಗಿದ್ದರು. ರಾಮಮಂದಿರದಿಂದ ಕರೆ ಮಾಡಿದ್ದ ಗೋಪಾಲ್ ಅವರ ಸಂಧಾನಕ್ಕೂ ಯತ್ನಿಸಿದ್ದರೂ ಈಶ್ವರಪ್ಪ ಪ್ರಯೋಜವಾಗಲಿಲ್ಲ. ಇತ್ತೀಚೆಗೆ ಬಿಜೆಪಿ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರವಾಲ್ ಮನೆಗೆ ಬಂದಾಗ, ವಿಜಯೇಂದ್ರ ಮತ್ತು ಬಿಎಸ್ ಯಡಿಯೂರಪ್ಪ ವಿರುದ್ಧ ಈಶ್ವರಪ್ಪ ತಮ್ಮ ಅಸಮಾಧಾನ ಹೊರಹಾಕಿದ್ದರು.

- Advertisement -

Related news

error: Content is protected !!