Saturday, April 27, 2024
spot_imgspot_img
spot_imgspot_img

ಕೆಎಸ್‌ಆರ್‌ಟಿಸಿ ಬಸ್ಸು ಡಿಕ್ಕಿ; ಫುಡ್ ಡೆಲಿವರಿ ಬಾಯ್ ಮೃತ್ಯು..!

- Advertisement -G L Acharya panikkar
- Advertisement -

ಕೆಎಸ್‌ಆರ್‌ಟಿಸಿ ಬಸ್ಸು ಫುಡ್ ಡೆಲಿವರಿ ಬಾಯ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೃತಪಟ್ಟ ಘಟನೆ ಮೈಸೂರು ರೋಡ್‌ ಸ್ಯಾಟ್‌ಲೈಟ್‌ ಬಸ್‌ ನಿಲ್ದಾಣದ ಬಳಿ ದುರ್ಘಟನೆ ನಡೆದಿದೆ.

ಮೃತ ಫುಡ್ ಡೆಲಿವರ್‌ ಬಾಯ್‌ನನ್ನು ಬಸವರಾಜು ಎಂದು ಗುರುತಿಸಲಾಗಿದೆ. ಮೈಸೂರು ರಸ್ತೆಯ ಸ್ಯಾಟ್‌ಲೈಟ್‌ ಬಸ್‌ ನಿಲ್ದಾಣದ ಬಳಿ ಇವರ ಬೈಕ್‌ಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿದೆ. ರಾತ್ರಿ ಒಂದು ಗಂಟೆಗೆ ಮೈಸೂರು ರೋಡ್‌ ಕಡೆಗೆ ಡೆಲಿವರಿ ಕೊಡಲೆಂದು ಬೈಕ್‌ನಲ್ಲಿ ಹೋಗುತ್ತಿದ್ದಾಗ ಹಿಂದಿನಿಂದ ವೇಗವಾಗಿ ಬಂದ ಬಸ್‌ ಅಪ್ಪಳಿಸಿದೆ.

ಡಿಕ್ಕಿ ಹೊಡೆದ ಬಳಿಕ ಬಸ್ ಮುಂಭಾಗದ ಎಡಗಡೆಯ ಚಕ್ರಕ್ಕೆ ಬಸವರಾಜು ಸಿಲುಕಿದ್ದರು. ಈ ವೇಳೆ ಬಸ್ ತಲೆಯ ಮೇಲೆ ಹರಿದ ಪರಿಣಾಮ ಬಸವರಾಜ್ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಮೃತ ಫುಡ್ ಡೆಲಿವರಿ ಬಾಯ್ ಹೆಲ್ಮೆಟ್ ಧರಿಸಿದ್ದರೂ ಸಾವಿಗೀಡಾಗಿದ್ದಾರೆ.

ಬಸ್‌ ಚಾಲಕನ ನಿರ್ಲಕ್ಷ್ಯದ ಚಾಲನೆಯ ಪರಿಣಾಮ ಅಪಘಾತ ಸಂಭವಿಸಿದೆ ಎನ್ನಲಾಗಿದ್ದು, ಸ್ಥಳದಿಂದ ಬಸ್ ಚಾಲಕ ನಾಪತ್ತೆಯಾಗಿದ್ದಾನೆ. ಸ್ಥಳಕ್ಕೆ ಬ್ಯಾಟರಾಯನಪುರ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಮೃತದೇಹ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ.

- Advertisement -

Related news

error: Content is protected !!