- Advertisement -
- Advertisement -




ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದಲ್ಲೇ ಕೆಎಸ್ಆರ್ಟಿಸಿ (KSRTC) ಬಸ್ ಪಲ್ಟಿಯಾಗಿ ಓರ್ವ ಮಹಿಳೆ ಸಾವನ್ನಪ್ಪಿದ್ದು, 20ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿರುವಂತಹ ಘಟನೆ ವಿಜಯನಗರ ಜಿಲ್ಲೆಯ ಹರಪ್ಪನಹಳ್ಳಿ ತಾಲೂಕಿನ ಸತ್ತೂರು ಗ್ರಾಮದ ಬಳಿ ನಡೆದಿದೆ.
ಬಸ್ನಲ್ಲಿ ಪ್ರಯಾಣಿಸುತ್ತಿದ್ದ ಸುತ್ತೂರು ಗ್ರಾಮದ ಹನುಮಕ್ಕ (45) ಮೃತ ಮಹಿಳೆ.
ಬಸ್ನಲ್ಲಿದ್ದ 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದು, ಒಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಗಾಯಾಳುಗಳಿಗೆ ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ದಾವಣಗೆರೆಯಿಂದ ಹರಪ್ಪನಹಳ್ಳಿ ಕಡೆ ಕೆಎಸ್ಆರ್ಟಿಸಿ ಬಸ್ ತೆರಳುತ್ತಿದ್ದಾಗ ದುರಂತ ಸಂಭವಿಸಿದೆ.ಅರಸೀಕೆರೆ ಪೊಲೀಸ್ ಠಾಣಾ ವ್ಯಾಪ್ತಿ ಘಟನೆ ನಡೆದಿದೆ.
- Advertisement -