Sunday, April 28, 2024
spot_imgspot_img
spot_imgspot_img

ಬೆಳ್ತಂಗಡಿ: ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಕೆಎಸ್‌ಆರ್‌ಟಿ‍ಸಿ ಚಾಲಕ ಮೃತ್ಯು

- Advertisement -G L Acharya panikkar
- Advertisement -

ಬೆಳ್ತಂಗಡಿ: ಬೈಕ್ ಹಾಗೂ ಕಾರು ಮುಖಾಮುಖಿ ಡಿಕ್ಕಿ ಹೊಡೆದ ಘಟನೆ ಕೊಕ್ಕಡ ಗ್ರಾಮದ ಉಪ್ಪಾರಪಳಿಕೆ ಸೇತುವೆ ಸಮೀಪ ನಡೆದಿತ್ತು. ಅಪಘಾತದಲ್ಲಿ ಗಂಭೀರ ಗಾಯಗೊಂಡ ಬೈಕ್‌ ಸವಾರನನ್ನು ಆಸ್ಪತ್ರೆಗೆ ದಾಖಲಿಸಿದ್ದು, ಅವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಬೈಕ್ ಸವಾರನನ್ನು ಕೆಎಸ್‌ಆರ್‌ಟಿಸಿ ಬಸ್‌ ಚಾಲಕ ಗೋಳಿತೊಟ್ಟು ಪೆರಣ ನಿವಾಸಿ ಅಶೋಕ್ ಮೃತ ದುರ್ದೈವಿ. ಮೇ.18ರಂದು ಈ ಘಟನೆ ನಡೆದಿದ್ದು, ಅಶೋಕ್ ಅವರು ಗಂಭೀರ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದರು.

ಬೈಕ್ ಸವಾರ ಅಶೋಕ್ ಕೆಎಸ್‌ಆರ್‌ಟಿ‍ಸಿ ಬಸ್ ಚಾಲಕನಾಗಿದ್ದು, ಕರ್ತವ್ಯ ಮುಗಿಸಿ ಧರ್ಮಸ್ಥಳದಿಂದ ಉಪ್ಪಾರಪಳಿಕೆ ಮಾರ್ಗವಾಗಿ ಪೆರಣದ ಮನೆಗೆ ಹೋಗುತ್ತಿದ್ದ ಸಂದರ್ಭ ಉಪ್ಪಿನಂಗಡಿಯಿಂದ ಉಪ್ಪಾರಪಳಿಕೆಯ ಕಡೆಗೆ ಬರುತ್ತಿದ್ದ ಉಪ್ಪಿನಂಗಡಿ ಮೂಲದ ಉದ್ಯಮಿಯೊಬ್ಬರ ಕಾರು ಡಿಕ್ಕಿಯಾಗಿದೆ. ಡಿಕ್ಕಿ ರಭಸಕ್ಕೆ ಕಾರಿನ ಮುಂಭಾಗ ಹಾಗೂ ಬೈಕ್ ಸಂಪೂರ್ಣ ನಜ್ಜುಗುಜ್ಜಾಗಿತ್ತು.

- Advertisement -

Related news

error: Content is protected !!