Tuesday, April 23, 2024
spot_imgspot_img
spot_imgspot_img

ಪುತ್ತೂರು: KSTRC ಮಜ್ದೂರು ಸಂಘದಿಂದ ಮುಂದುವರಿದ ಅಮರಣಾಂತ ಉಪವಾಸ ಸತ್ಯಾಗ್ರಹ; ಇಂದು ಸಂಜೆ ಸಚಿವ ಎಸ್ ಅಂಗಾರ ಭೇಟಿ

- Advertisement -G L Acharya panikkar
- Advertisement -

ಪುತ್ತೂರು: ವೇತನ ಮತ್ತು ನಿವೃತ್ತಿ ನೌಕರರು ಸೇರಿದಂತೆ ಇತರ ಸೌಲಭ್ಯಗಳ ಬೇಡಿಕೆ ಮುಂದಿಟ್ಟು KSRTC ಕೇಂದ್ರ ಕಚೇರಿಯ ಅಧಿಕಾರಿಗಳ ಧೋರಣೆಯನ್ನು ಖಂಡಿಸಿ ಪುತ್ತೂರು ವಿಭಾಗ KSRTC ಮಜ್ದೂರ್ ಸಂಘದ ಸದಸ್ಯರು ಅಮರ್ ಜವಾನ್ ಸ್ಮಾರಕ ಜ್ಯೋತಿ ಬಳಿ ನಡೆಸುತ್ತಿರುವ ಧರಣಿ ಸತ್ಯಾಗ್ರಹಕ್ಕೆ ಸ್ಪಂದನೆ ಸಿಗದ ಹಿನ್ನೆಲೆಯಲ್ಲಿ ನಿನ್ನೆಯಿಂದ ಅಮರಣಾಂತ ಉಪವಾಸ ಸತ್ಯಾಗ್ರಹ ಆರಂಭಗೊಂಡಿದೆ.

ಇಂದು ಇದಕ್ಕೆ ಮತ್ತಷ್ಟು ಬಲ ಬಂದಿದ್ದು ಮಜ್ದೂರು ಸಂಘ ಪುತ್ತೂರು ಘಟಕ ಇದರ ಅಧ್ಯಕ್ಷ 72 ವರ್ಷದ ಮಾಡಾವು ವಿಶ್ವನಾಥ ರೈ ಅವರು ಸೇರಿದಂತೆ 10 ಮಂದಿ ಉಪವಾಸ ಆರಂಭಿಸಿದ್ದರು.

ಧರಣಿ ಮಾಡುತ್ತಿದ್ದ ಸ್ಥಳಕ್ಕೆ ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಸಂಜೀವ ಮಠಂದೂರು ಬೇಟಿ ನೀಡಿ ಮಾಡಾವು ವಿಶ್ವನಾಥ ರೈ ಅವರ ಮನವೊಲಿಸಿ ಸತ್ಯಾಗ್ರಹವನ್ನು ಕೈಬಿಡುವಂತೆ ಕೇಳಿಕೊಂಡಿದ್ದು ಬೇಡಿಕೆಯನ್ನು ಸಚಿವರೊಂದಿಗೆ ಮಾತಾನಾಡಿ ಈಡೇರಿಸುವಂತೆ ಭರವಸೆ ನೀಡಿದ್ದಾರೆ.

ಇನ್ನು ಸಂಜೆ ವೇಳೆಗೆ ಸಚಿವ ಎಸ್ ಅಂಗಾರ ಅವರು ಧರಣಿ ಸ್ಥಳಕ್ಕೆ ಭೇಟಿ ನೀಡಲಿದ್ದಾರೆ. ಉಳಿದಂತೆ ಶಾಂತರಾಮ ವಿಟ್ಲ, ಸಂಜೀವ ಗೌಡ, ಮಹಾಬಲ ಗಡಿಮಾರ್, ಅಶೋಕ್ ಭಟ್, ರಾಮಕೃಷ್ಣ ಜಿ., ಶ್ರೀಧರ್ ಭೂಸಾರೆ, ವಾಸುದೇವ ಪ್ರಭು, ಜಗದೀಶ ಕುಂಬಾರ, ಸತ್ಯ ನಾರಾಯಣ ಡಿ, ದೇವಾನಂದ ವಿಟ್ಲ ಉಪವಾಸ ಸತ್ಯಾಗ್ರಹವನ್ನು ಮುಂದುವರಿಸಿದ್ದಾರೆ.

- Advertisement -

Related news

error: Content is protected !!