Wednesday, May 8, 2024
spot_imgspot_img
spot_imgspot_img

ಕೆಎಸ್‌ಆರ್‌ಟಿಸಿ ಬಸ್‌ ಹತ್ತುವ ವೇಳೆ ನೂಕು ನುಗ್ಗಲು: ಕೆಎಸ್‌ಆರ್‌ಟಿಸಿ ಸಿಬ್ಬಂದಿ ಸಾವು

- Advertisement -G L Acharya panikkar
- Advertisement -

ಬಸ್ ಹತ್ತುವ ಭರದಲ್ಲಿ‌ ನೂಕು ನುಗ್ಗಲು ಸಂಭವಿಸಿ ಬಸ್ ಚಕ್ರದಡಿ ಸಿಲುಕಿ ಸಿಬ್ಬಂದಿ (ಚಾಲಕ ಕಂ ನಿರ್ವಾಹಕ) ಸಾವನ್ನಪ್ಪಿದ ಘಟನೆ ಬಾಗಲಕೋಟೆಯ ‌ನವನಗರದ ಬಸ್ ನಿಲ್ದಾಣದಲ್ಲಿ ನಡೆದಿದೆ. ಗದ್ಯಪ್ಪ ಗಡ್ಡಿ (50) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ.

ಮೃತ ಗದ್ಯಪ್ಪ ಗಡ್ಡಿ ಬಾಗಲಕೋಟೆ ‌ಜಿಲ್ಲೆ ಹುನಗುಂದ ತಾಲೂಕಿನ ಕೌಜಗನೂರು ಗ್ರಾಮದ ನಿವಾಸಿಯಾಗಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಕಡೂರು ಕೆಎಸ್‌ಆರ್‌ಟಿಸಿ ಡಿಪೋದಲ್ಲಿ ಕೆಲಸ ಮಾಡುತ್ತಿದ್ದರು. ಇಂದು ಮುಂಜಾನೆ ಬಾಗಲಕೋಟೆಯಿಂದ ಇಳಕಲ್ ಕಡೆ ಹೊರಟಿದ್ದ ಕೆಎಸ್‌ಆರ್‌ಟಿಸಿ ಬಸ್‌ ಹತ್ತುವ ಸಂದರ್ಭದಲ್ಲಿ ನೂಕುನುಗ್ಗಲು ಉಂಟಾಗಿದೆ.

ಈ ವೇಳೆ ಜನ ನೂಕು ನುಗ್ಗಲಿಂದ ಗದ್ಯಪ್ಪ ಗಡ್ಡಿ ಆಯತಪ್ಪಿ ಚಕ್ರದಡಿ ಸಿಲುಕಿ ಸಾವನ್ನಪ್ಪಿದ್ದಾರೆ. ಬಾಗಲಕೋಟೆ ಸಂಚಾರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆ ಮುಂದುವರಿಸಿದ್ದಾರೆ

- Advertisement -

Related news

error: Content is protected !!