Sunday, June 29, 2025
spot_imgspot_img
spot_imgspot_img

ಕರಾವಳಿ ಜಿಲ್ಲೆಯಲ್ಲಿ ಹಲವಡೆ ಭಾರಿ ಮಳೆ: ಕುಕ್ಕೆ ಸುಬ್ರಹ್ಮಣ್ಯ ಸ್ನಾನಘಟ್ಟ ಜಲಾವೃತ.

- Advertisement -
- Advertisement -

ದಕ್ಷಿಣಕನ್ನಡ: ಜಿಲ್ಲೆಯಲ್ಲಿ ಮೂರು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ಕುಕ್ಕೆ ಸುಬ್ರಹ್ಮಣ್ಯ ಸ್ನಾನಘಟ್ಟ ಸಂಪೂರ್ಣ ಜಲಾವೃತವಾಗಿದೆ.

ನಿರಂತರ ಮಳೆಯಿಂದಾಗಿ ಕುಮಾರಧಾರ, ಗುಂಡ್ಯಹೊಳೆ, ನೇತ್ರಾವತಿ, ಪಯಸ್ವಿನಿ ನದಿಗಳು ತುಂಬಿ ಹರಿಯುತ್ತಿವೆ. ಇದರಿಂದಾಗಿ ಕುಕ್ಕೆ ಸುಬ್ರಹ್ಮಣ್ಯ ಸ್ನಾನಘಟ್ಟ ಜಲಾವೃತವಾಗಿದೆ.

ನದಿಗಳಲ್ಲಿ ನೀರಿನ ಮಟ್ಟ ಏರಿಕೆಯಾಗುತ್ತಿದ್ದು, ಹಲವೆಡೆ ತೋಟಗಳಿಗೂ ನೀರು ನುಗ್ಗಿದೆ. ಸುಳ್ಯ, ಸುಬ್ರಹ್ಮಣ್ಯ, ಕಡಬ, ನೆಲ್ಯಾಡಿ, ಕೊಲ್ಲಮೊಗ್ರು, ಕಲ್ಮಕಾರು,ಶೀರಾಡಿ, ಗುತ್ತಿಗಾರು, ಪಂಜ, ಬಳ್ಪ, ನಿಂತಿಕಲ್ ಮುಂತಾದ ಕಡೆಗಳಲ್ಲಿ ನಿರಂತರ ಮಳೆಗೆ ಸಣ್ಣಪುಟ್ಟ ನದಿಗಳು ಉಕ್ಕಿ ಹರಿಯುತ್ತಿವೆ.

- Advertisement -

Related news

error: Content is protected !!