Friday, March 29, 2024
spot_imgspot_img
spot_imgspot_img

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಅಂತರ್‌ರಾಜ್ಯ ಮತ್ತು ಅಂತರ್‌ ಜಿಲ್ಲಾ ಭಕ್ತಾಧಿಗಳಿಗೆ ನಿರ್ಬಂಧ!

- Advertisement -G L Acharya panikkar
- Advertisement -

ಸುಬ್ರಹ್ಮಣ್ಯ: ಕೋವಿಡ್‌ 19 ಮುಂಜಾಗ್ರತಾ ಕ್ರಮವಾಗಿ ಸುಪ್ರಸಿದ್ಧ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಚಂಪಾಷಷ್ಠಿ ಜಾತ್ರಾ ಮಹೋತ್ಸವದಲ್ಲಿ ರಥೋತ್ಸವ ಸೇವೆಗಳಿಗೆ ಮುಂಗಡ ನೋಂದಾಯಿಸಿಕೊಂಡಿರುವ ಭಕ್ತಾದಿಗಳನ್ನು ಹೊರತುಪಡಿಸಿ, ಮಹೋತ್ಸವದ ಚೌತಿ, ಪಂಚಮಿ ಹಾಗೂ ಷಷ್ಠಿ ರಥೋತ್ಸವಗಳನ್ನು ಒಳಗೊಂಡಂತೆ ಶ್ರೀ ದೇವಳಕ್ಕೆ ಡಿ.17ರಿಂದ ಡಿ.20ರವರೆಗೆ ಎಲ್ಲಾ ಅಂತರ್‌ ರಾಜ್ಯ ಹಾಗೂ ಅಂತರ್‌ ಜಿಲ್ಲಾ ಪ್ರಯಾಣಿಕರು ಹಾಗೂ ಭಕ್ತಾಧಿಗಳಿಗೆ ನಿರ್ಬಂಧ ಹೇರಿ ದ.ಕ. ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ. ಅವರು ಡಿ.14ರಂದು ಆದೇಶ ಹೊರಡಿಸಿದ್ದಾರೆ.

ದೇವಳದ ಆಡಳಿತಾಧಿಕಾರಿಗಳು ಹಾಗೂ ಜಿಲ್ಲಾಆರೋಗ್ಯಧಿಕಾರಿಗಳ ಉಲ್ಲೇಖದಂತೆ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿಡಿ.12ರಿಂದ ಡಿ.26ರ ವರೆಗೆ ವಾರ್ಷಿಕ ಚಂಪಾಷಷ್ಠಿ ಮಹೋತ್ಸವ ನಡೆಯಲಿದ್ದು, ಕೋವಿಡ್‌ 19 ಹಿನ್ನಲೆಯಲ್ಲಿ ಕೋವಿಡ್‌ ಮಾರ್ಗಸೂಚಿಯಂತೆ ಸರಳವಾಗಿ ನೆರವೇರಿಸಲು ತೀರ್ಮಾನಿಸಲಾಗಿದೆ.

- Advertisement -

Related news

error: Content is protected !!