ಇಡ್ಕಿದು: ಭಾರತೀಯ ಜನತಾ ಪಕ್ಷ ಪುತ್ತೂರು ಗ್ರಾಮಾಂತರ ಮಂಡಲ ಮತ್ತು ಪುಣಚ ಮಹಾ ಶಕ್ತಿ ಕೇಂದ್ರದ ಇಡ್ಕಿದು -ಕುಳ ಶಕ್ತಿ ಕೇಂದ್ರದ ಪಂಚಾಯತ್ ವ್ಯಾಪ್ತಿಯ ಬಿ.ಜೆ.ಪಿ ಕುಟುಂಬ ಮಿಲನ ಕಾರ್ಯಕ್ರಮವು ಇಡ್ಕಿದು ಸೇವಾ ಸಹಕಾರಿ ಸಂಘದ ಕಬಕ ಶಾಖೆಯ ಸಭಾಭವನದಲ್ಲಿ ನಡೆಯಿತು.
ಈ ಕಾರ್ಯಕ್ರಮವನ್ನು ಮಂಗಳೂರು ವಿಭಾಗ ಸಹ ಪ್ರಭಾರಿಗಳಾದ ಶ್ರೀ ಗೋಪಾಲಕೃಷ್ಣ ಹೇರಳೆಯವರು ದೀಪ ಬೆಳಗಿಸಿ ಉದ್ಘಾಟಿಸಿದರು. ವೇದಿಕೆಯಲ್ಲಿ ಪುಣಚ ಮಹಾ ಶಕ್ತಿ ಕೇಂದ್ರದ ಪ್ರಭಾರಿ ಶ್ರೀ ಶಂಭು ಭಟ್ , ಪುಣಚ ಮಹಾ ಶಕ್ತಿ ಕೇಂದ್ರದ ಅಧ್ಯಕ್ಷರಾದ ಶ್ರೀ ಹರಿಪ್ರಸಾದ್ ಯಾದವ್, ಜಿ.ಪಂ. ಸದಸ್ಯರಾದ ಶ್ರೀಮತಿ ಜಯಶ್ರೀ ಕೋಡಂದೂರು, ಇಡ್ಕಿದು ತಾಲೂಕು ಪಂಚಾಯತ್ ಸದಸ್ಯರಾದ ವನಜಾಕ್ಷಿ ಎಸ್ ಭಟ್, ಪುಣಚ ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ದಯಾನಂದ ಶೆಟ್ಟಿ , ಇಡ್ಕಿದು ಮತ್ತು ಕುಳ ಚುಣಾವಣಾ ಸಹ ಪ್ರಮುಖ್ ಪುನೀತ್ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಪುಣಚ ಮಹಾ ಶಕ್ತಿ ಕೇಂದ್ರದ ಮಾಜಿ ಅಧ್ಯಕ್ಷರಾದ ಕೆ.ಎಸ್ ಸುರೇಶ್ ಭಟ್, ಪುತ್ತೂರು ಬಿ.ಜೆ.ಪಿ ಗ್ರಾಮಾಂತರ ಮಂಡಲ ರೈತ ಮೋರ್ಚದ ಮಾಜಿ ಅಧ್ಯಕ್ಷರಾದ ಶ್ರೀ ರಾಜಾರಾಮ ಶೆಟ್ಟಿ ಕೋಲ್ಪೆ ಗುತ್ತು , ಇಡ್ಕಿದು ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ಶ್ರೀ ಸುಧಾಕರ ಶೆಟ್ಟಿ, ವಿಟ್ಲ ಗ್ರಾಮೀಣ ಬ್ಯಾಂಕಿನ ಉಪಾಧ್ಯಕ್ಷರಾದ ಶ್ರೀ ಮೋಹನ್ ಕೆ.ಎಸ್ , ಅಮೃತ ಸಿಂಚನ ರೈತ ಸೇವಾ ಒಕ್ಕೂಟದ ಪ್ರಪುಲ್ಲಚಂದ್ರ ಪಿ.ಜಿ., ಎರಡು ಗ್ರಾಮಗಳ ಬೂತಿನ ಅಧ್ಯಕ್ಷರು ಪ್ರಧಾನ ಕಾರ್ಯದರ್ಶಿಗಳು, ಸದಸ್ಯರು,
ಮಹಿಳಾ ಮೋರ್ಚಾದ ಪದಾಧಿಕಾರಿಗಳು, ಸದಸ್ಯರು, ಸಹಕಾರಿ ಸಂಘದ ನಿರ್ದೇಶಕರು, ವಿವಿಧ ಮೋರ್ಚಾದ ಪ್ರತಿನಿಧಿಗಳು, ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರು ,ನಿರ್ದೆಶಕರು ,ಎರಡು ಗ್ರಾಮದ ಬೂತಿನ ಮತಗಟ್ಟೆ ಸದಸ್ಯರು , ಮಾಜಿ ತಾಲೂಕು ಪಂಚಾಯತ್ ಸದಸ್ಯರು, ಮಾಜಿ ಪಂಚಾಯತ್ ಸದಸ್ಯರು , ಪಕ್ಷದ ಹಿರಿಯ-ಕಿರಿಯ ಕಾರ್ಯಕರ್ತರು, ವಿವಿಧ ಸಂಘಟನೆಗಳ ಸದಸ್ಯರು , ಕಾರ್ಯಕರ್ತರು , ಚುನಾವಣಾ ಪೇಜ್ ಪ್ರಮುಖರು ಈ ಸಭೆಯಲ್ಲಿ ಉಪಸ್ಥಿತರಿದ್ದರು. ವಿಶಾಂತಿ ಶೆಟ್ಟಿ ಉರಿಮಜಲು ಪ್ರಾರ್ಥಿಸಿ, ಇಡ್ಕಿದು ಶಕ್ತಿ ಕೇಂದ್ರದ ಸಂಚಾಲಕ ಎಂ.ಸುಧೀರ್ ಕುಮಾರ್ ಶೆಟ್ಟಿ ಸ್ವಾಗತಿಸಿ, ಕುಳ ಶಕ್ತಿ ಕೇಂದ್ರದ ಸಂಚಾಲಕ ಕೃಷ್ಣಪ್ಪ ಗೌಡ ಧನ್ಯವಾದವಿತ್ತರು . ಈಶ್ವರ ಕುಲಾಲ್ ಕಾರ್ಯಕ್ರಮ ನಿರೂಪಿಸಿದರು.