- Advertisement -
- Advertisement -
ಕಾಸರಗೋಡು: ಯುವಕನನ್ನು ದುಷ್ಕರ್ಮಿಗಳ ತಂಡ ಮಾರಕಾಸ್ತ್ರಗಳಿಂದ ಕಡಿದು ಬರ್ಬರವಾಗಿ ಹತ್ಯೆಗೈದ ಘಟನೆ ಸೋಮವಾರ ಮಧ್ಯರಾತ್ರಿ ಕುಂಬಳೆ ಠಾಣಾ ವ್ಯಾಪ್ತಿಯ ನಾಯ್ಕಾಪು ಎಂಬಲ್ಲಿ ಘಟನೆ ನಡೆದಿದೆ.
ಮೃತಪಟ್ಟ ಯುವಕನನ್ನು ಹರೀಶ್ ಎಂದು ಗುರುತಿಸಲಾಗಿದೆ.ನಾಯ್ಕಾಪು ಭಗವತಿ ಮಿಲ್ ನಲ್ಲಿ ಕಳೆದ 15 ವರ್ಷಗಳಿಂದ ಕಾರ್ಮಿಕನಾಗಿರುವ ಹರೀಶ್ ಮೇಲೆ ಮನೆ ಸಮೀಪ ತಂಡವೊಂದು ದಾಳಿ ನಡೆಸಿ ಕೊಚ್ಚಿ ಕೊಲೆಗೈದು ಪರಾರಿಯಾಗಿದೆ.ಘಟನೆಗೆ ಕಾರಣ ಹಾಗೂ ಆರೋಪಿಗಳ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದು ಬಂದಿಲ್ಲ. ಕುಂಬಳೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
- Advertisement -